22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಕೊಯ್ಯೂರು: ಶ್ರೀಕೃಷ್ಣ ಭಜನಾ ಮಂಡಳಿಗೆ ಇನ್ವರ್ಟರ್ ಕೊಡುಗೆ

ಕೊಯ್ಯೂರು: ಆದೂರುಪೆರಾಲ್ ಶ್ರೀಕೃಷ್ಣ ಭಜನಾ ಮಂಡಳಿಯ ಸದಸ್ಯರು ಇತ್ತೀಚೆಗೆ ಪಾಂಬೇಲು ದೇವರಾಜ ಗೌಡರ ನೂತನ ಮನೆಯ ವಾಸ್ತು ಪೂಜೆಯ ಸಂದರ್ಭದಲ್ಲಿ ಭಜನಾ ಸೇವೆಯನ್ನು ನಡೆಸಿದರು.

ಭಜನಾ ಮಂಡಳಿಯ ಪದಾಧಿಕಾರಿಗಳ ಹಾಗೂ ಸದಸ್ಯರುಗಳ ಒಗ್ಗಟ್ಟು ಹಾಗೂ ವಹಿಸಿಕೊಂಡಂತಹ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ರೀತಿಗೆ ದೇವರಾಜ ಗೌಡ ಹಾಗೂ ಅವರ ಮನೆಯವರು ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಸುಮಾರು ರೂ.24 ಸಾವಿರ ವೆಚ್ಚದ ಇನ್ವರ್ಟರ್ ಕೊಡುಗೆಯಾಗಿ ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ಪಾಂಬೇಲು ದೇವರಾಜ ಗೌಡರ ಮಗ ಡಾಕ್ಟರ್ ಕಾರ್ತಿಕ್ ಅವರ ಪತ್ನಿ ಶ್ರೀಮತಿ ನಿರೀಕ್ಷಾ, ಕಾರ್ತಿಕ್ ರವರ ಮಗ ವಿಹಾನ್‌ಕೃಷ್ಣ, ಶ್ರೀ ಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷ ರೋಹಿತಾಶ್ವ ಉಮಿಯ ದರ್ಕಾಸು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್. ಭಜನಾ ಮಂದಿರದ ಉಪಾಧ್ಯಕ್ಷ ಸುಂದರ ಗೌಡ ಕಜೆಕೋಡಿ, ಕಾರ್ಯದರ್ಶಿ ಓಬಯ್ಯ ನಾಯ್ಕ, ಕೋಶಾಧಿಕಾರಿ ಬಾಲಕೃಷ್ಣ ಸಾಲ್ಯಾನ್, ಲೆಕ್ಕಪರಿಶೋಧಕರುಗಳಾದ ಲಿಂಗಪ್ಪ ಗೌಡ ಬೆರ್ಕೆ, ಹೇಮಂತ ಗೌಡ ದೇಂತ್ಯಾರುಬೊಟ್ಟು, ಭಜನಾ ಮಂಡಳಿಯ ಅರ್ಚಕ ಹೇಮಂತ ಗೌಡ ನಾಗನೊಡಿ, ಮಾಜಿ ಕಾರ್ಯದರ್ಶಿ ಮನೋಜ್ ಕುಮಾರ್ ಕಜೆ, ಮಾಜಿ ಜೊತೆ ಕಾರ್ಯದರ್ಶಿ ಜಿತೇಶ್ ಸಾಂತ್ಯೂಡಿ ಹಾಗೂ ವಸಂತ ನೇಕಾರ ಮುಂಡೆವು, ರಿತೇಶ್ ಬಜ, ಜನಾರ್ದನ ಉಮಿಯ, ಲತೀಶ ಆದೂರು ಪೇರಾಲ್, ನಿತಿನ್ ದೆಲೋಡಿ, ಕಮಲೇಶ್ ಸುರುಳಿ ಮತ್ತು ಭಜನಾ ಮಂಡಳಿಯ ಭಜಕ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಉದ್ಯಮಿ ಶಶಿಧರ ಶೆಟ್ಟಿ ಬರೋಡರಿಂದ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಬಡ ಬಂಟ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು

Suddi Udaya

ಕೊಯ್ಯೂರು : ಶ್ರೀ ಮಹಮ್ಮಾಯಿ ಸನ್ನಿಧಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

Suddi Udaya

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya

ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya
error: Content is protected !!