23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಕೊಯ್ಯೂರು: ಶ್ರೀಕೃಷ್ಣ ಭಜನಾ ಮಂಡಳಿಗೆ ಇನ್ವರ್ಟರ್ ಕೊಡುಗೆ

ಕೊಯ್ಯೂರು: ಆದೂರುಪೆರಾಲ್ ಶ್ರೀಕೃಷ್ಣ ಭಜನಾ ಮಂಡಳಿಯ ಸದಸ್ಯರು ಇತ್ತೀಚೆಗೆ ಪಾಂಬೇಲು ದೇವರಾಜ ಗೌಡರ ನೂತನ ಮನೆಯ ವಾಸ್ತು ಪೂಜೆಯ ಸಂದರ್ಭದಲ್ಲಿ ಭಜನಾ ಸೇವೆಯನ್ನು ನಡೆಸಿದರು.

ಭಜನಾ ಮಂಡಳಿಯ ಪದಾಧಿಕಾರಿಗಳ ಹಾಗೂ ಸದಸ್ಯರುಗಳ ಒಗ್ಗಟ್ಟು ಹಾಗೂ ವಹಿಸಿಕೊಂಡಂತಹ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ರೀತಿಗೆ ದೇವರಾಜ ಗೌಡ ಹಾಗೂ ಅವರ ಮನೆಯವರು ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಸುಮಾರು ರೂ.24 ಸಾವಿರ ವೆಚ್ಚದ ಇನ್ವರ್ಟರ್ ಕೊಡುಗೆಯಾಗಿ ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ಪಾಂಬೇಲು ದೇವರಾಜ ಗೌಡರ ಮಗ ಡಾಕ್ಟರ್ ಕಾರ್ತಿಕ್ ಅವರ ಪತ್ನಿ ಶ್ರೀಮತಿ ನಿರೀಕ್ಷಾ, ಕಾರ್ತಿಕ್ ರವರ ಮಗ ವಿಹಾನ್‌ಕೃಷ್ಣ, ಶ್ರೀ ಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷ ರೋಹಿತಾಶ್ವ ಉಮಿಯ ದರ್ಕಾಸು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್. ಭಜನಾ ಮಂದಿರದ ಉಪಾಧ್ಯಕ್ಷ ಸುಂದರ ಗೌಡ ಕಜೆಕೋಡಿ, ಕಾರ್ಯದರ್ಶಿ ಓಬಯ್ಯ ನಾಯ್ಕ, ಕೋಶಾಧಿಕಾರಿ ಬಾಲಕೃಷ್ಣ ಸಾಲ್ಯಾನ್, ಲೆಕ್ಕಪರಿಶೋಧಕರುಗಳಾದ ಲಿಂಗಪ್ಪ ಗೌಡ ಬೆರ್ಕೆ, ಹೇಮಂತ ಗೌಡ ದೇಂತ್ಯಾರುಬೊಟ್ಟು, ಭಜನಾ ಮಂಡಳಿಯ ಅರ್ಚಕ ಹೇಮಂತ ಗೌಡ ನಾಗನೊಡಿ, ಮಾಜಿ ಕಾರ್ಯದರ್ಶಿ ಮನೋಜ್ ಕುಮಾರ್ ಕಜೆ, ಮಾಜಿ ಜೊತೆ ಕಾರ್ಯದರ್ಶಿ ಜಿತೇಶ್ ಸಾಂತ್ಯೂಡಿ ಹಾಗೂ ವಸಂತ ನೇಕಾರ ಮುಂಡೆವು, ರಿತೇಶ್ ಬಜ, ಜನಾರ್ದನ ಉಮಿಯ, ಲತೀಶ ಆದೂರು ಪೇರಾಲ್, ನಿತಿನ್ ದೆಲೋಡಿ, ಕಮಲೇಶ್ ಸುರುಳಿ ಮತ್ತು ಭಜನಾ ಮಂಡಳಿಯ ಭಜಕ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಗೌಡ ಸಮಾಜ ಬಾಂಧವರು ಜಾತಿ ಕಾಲಂ ನಲ್ಲಿ ಒಕ್ಕಲಿಗ , ಉಪಜಾತಿಯ ಕಾಲಂ ನಲ್ಲಿ ಗೌಡ ಎಂದು ನಮೂದಿಸುವಂತೆ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮಗೌಡ ಹೇಳಿಕೆ

Suddi Udaya

ಮದ್ದಡ್ಕ: ಬಾವುಟಗುಡ್ಡೆ ನಿವಾಸಿ ಸುನೀತ ಶೆಣೈ ನಿಧನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜನ ಸಹಭಾಗಿತ್ವದಲ್ಲಿ 8ನೇ ವರ್ಷದ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16529 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಭೇಟಿ

Suddi Udaya
error: Content is protected !!