22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ಎಂಬ ಘೋಷ ವಾಕ್ಯದೊಂದಿಗೆ 2025-26ನೇ ಸಾಲಿನ ಪ್ರಾರಂಭೋತ್ಸವವನ್ನು ಜೂ.2ರಂದು ವಿಜೃಂಭಣೆಯಿಂದ ಆಚರಿಸಲಾಯಿತು.

ಕ್ಷೇತ್ರದ ಮಣೆಗಾರರಾದ ವಸಂತ ಭಟ್ ದೀಪ ಬೆಳಗಿಸಿ ಉದ್ಘಾಟನೆ ಮಾಡಿ 2025 26ನೇ ಸಾಲಿನ ಶೈಕ್ಷಣಿಕ ವರ್ಷವೂ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ, ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಎಂದು ಆಶೀರ್ವಾದ ಮಾಡಿದರು.

ನೂತನವಾಗಿ ಸೇರಿದ ಮಕ್ಕಳನ್ನು ಪನ್ನೀರ್ ಹಾಕಿ ಆರತಿ ಮಾಡಿ ಸ್ವಾಗತಿ, ಸ್ಲೇಟು, ಬಳಪ, ಪುಸ್ತಕಗಳನ್ನು ನೀಡಿ ಆತ್ಮೀಯವಾಗಿ ಶಾಲೆಗೆ ಶಿಕ್ಷಕರು ಬರಮಾಡಿಕೊಂಡರು.ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜ್ ರಜಪೂತ್, ಹಿರಿಯ ಶಿಕ್ಷಕರಾದ ಜೋಸೆಫ್, ಶ್ರೀಮತಿ ಶ್ರೀಜಾ ಹಾಗೂ ಪೋಷಕ ಸುರೇಶ್ ಉಪಸ್ಥಿತರಿದ್ದರು.

ಹಿರಿಯ ಶಿಕ್ಷಕ ಜೋಸೆಫ್ ಪ್ರಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.ಶ್ರೀಮತಿ ಪೂರ್ಣಿಮಾ ಕೆ.ಎಂ ನಿರೂಪಿಸಿದ ಕಾರ್ಯಕ್ರಮವನ್ನು ಶ್ರೀಮತಿ ಶ್ರೀಜಾ ಸ್ವಾಗತಿಸಿ, ಶ್ರೀಮತಿ ಉಷಾ ವಂದನಾರ್ಪಣೆ ಗೈದರು. ಎಲ್ಲಾ ಶಿಕ್ಷಕರು ಸಹಕರಿಸಿದರು.

Related posts

ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಇಂದಬೆಟ್ಟು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಇಕೋ ಕ್ಲಬ್ ಉದ್ಘಾಟನೆ

Suddi Udaya
error: Content is protected !!