23.2 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ಎಂಬ ಘೋಷ ವಾಕ್ಯದೊಂದಿಗೆ 2025-26ನೇ ಸಾಲಿನ ಪ್ರಾರಂಭೋತ್ಸವವನ್ನು ಜೂ.2ರಂದು ವಿಜೃಂಭಣೆಯಿಂದ ಆಚರಿಸಲಾಯಿತು.

ಕ್ಷೇತ್ರದ ಮಣೆಗಾರರಾದ ವಸಂತ ಭಟ್ ದೀಪ ಬೆಳಗಿಸಿ ಉದ್ಘಾಟನೆ ಮಾಡಿ 2025 26ನೇ ಸಾಲಿನ ಶೈಕ್ಷಣಿಕ ವರ್ಷವೂ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ, ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಎಂದು ಆಶೀರ್ವಾದ ಮಾಡಿದರು.

ನೂತನವಾಗಿ ಸೇರಿದ ಮಕ್ಕಳನ್ನು ಪನ್ನೀರ್ ಹಾಕಿ ಆರತಿ ಮಾಡಿ ಸ್ವಾಗತಿ, ಸ್ಲೇಟು, ಬಳಪ, ಪುಸ್ತಕಗಳನ್ನು ನೀಡಿ ಆತ್ಮೀಯವಾಗಿ ಶಾಲೆಗೆ ಶಿಕ್ಷಕರು ಬರಮಾಡಿಕೊಂಡರು.ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜ್ ರಜಪೂತ್, ಹಿರಿಯ ಶಿಕ್ಷಕರಾದ ಜೋಸೆಫ್, ಶ್ರೀಮತಿ ಶ್ರೀಜಾ ಹಾಗೂ ಪೋಷಕ ಸುರೇಶ್ ಉಪಸ್ಥಿತರಿದ್ದರು.

ಹಿರಿಯ ಶಿಕ್ಷಕ ಜೋಸೆಫ್ ಪ್ರಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.ಶ್ರೀಮತಿ ಪೂರ್ಣಿಮಾ ಕೆ.ಎಂ ನಿರೂಪಿಸಿದ ಕಾರ್ಯಕ್ರಮವನ್ನು ಶ್ರೀಮತಿ ಶ್ರೀಜಾ ಸ್ವಾಗತಿಸಿ, ಶ್ರೀಮತಿ ಉಷಾ ವಂದನಾರ್ಪಣೆ ಗೈದರು. ಎಲ್ಲಾ ಶಿಕ್ಷಕರು ಸಹಕರಿಸಿದರು.

Related posts

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರಾಗಿ ರೂಪ ಎ ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಆಯ್ಕೆ

Suddi Udaya

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

Suddi Udaya
error: Content is protected !!