July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ಎಂಬ ಘೋಷ ವಾಕ್ಯದೊಂದಿಗೆ 2025-26ನೇ ಸಾಲಿನ ಪ್ರಾರಂಭೋತ್ಸವವನ್ನು ಜೂ.2ರಂದು ವಿಜೃಂಭಣೆಯಿಂದ ಆಚರಿಸಲಾಯಿತು.

ಕ್ಷೇತ್ರದ ಮಣೆಗಾರರಾದ ವಸಂತ ಭಟ್ ದೀಪ ಬೆಳಗಿಸಿ ಉದ್ಘಾಟನೆ ಮಾಡಿ 2025 26ನೇ ಸಾಲಿನ ಶೈಕ್ಷಣಿಕ ವರ್ಷವೂ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ, ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಎಂದು ಆಶೀರ್ವಾದ ಮಾಡಿದರು.

ನೂತನವಾಗಿ ಸೇರಿದ ಮಕ್ಕಳನ್ನು ಪನ್ನೀರ್ ಹಾಕಿ ಆರತಿ ಮಾಡಿ ಸ್ವಾಗತಿ, ಸ್ಲೇಟು, ಬಳಪ, ಪುಸ್ತಕಗಳನ್ನು ನೀಡಿ ಆತ್ಮೀಯವಾಗಿ ಶಾಲೆಗೆ ಶಿಕ್ಷಕರು ಬರಮಾಡಿಕೊಂಡರು.ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜ್ ರಜಪೂತ್, ಹಿರಿಯ ಶಿಕ್ಷಕರಾದ ಜೋಸೆಫ್, ಶ್ರೀಮತಿ ಶ್ರೀಜಾ ಹಾಗೂ ಪೋಷಕ ಸುರೇಶ್ ಉಪಸ್ಥಿತರಿದ್ದರು.

ಹಿರಿಯ ಶಿಕ್ಷಕ ಜೋಸೆಫ್ ಪ್ರಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.ಶ್ರೀಮತಿ ಪೂರ್ಣಿಮಾ ಕೆ.ಎಂ ನಿರೂಪಿಸಿದ ಕಾರ್ಯಕ್ರಮವನ್ನು ಶ್ರೀಮತಿ ಶ್ರೀಜಾ ಸ್ವಾಗತಿಸಿ, ಶ್ರೀಮತಿ ಉಷಾ ವಂದನಾರ್ಪಣೆ ಗೈದರು. ಎಲ್ಲಾ ಶಿಕ್ಷಕರು ಸಹಕರಿಸಿದರು.

Related posts

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಉಜಿರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ನಿಧನ

Suddi Udaya

ಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಜೀವ ಜಲ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ನ.21: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!