32.9 C
ಪುತ್ತೂರು, ಬೆಳ್ತಂಗಡಿ
March 6, 2026
ಶಿಕ್ಷಣ ಸಂಸ್ಥೆ

ಮಾಲಾಡಿ ಸ. ಉ. ಪ್ರಾ.ಶಾಲಾ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಬುಕ್ ಹಾಗೂ ಕೊಡೆ ವಿತರಣೆ

ಮಾಲಾಡಿ: ಜೂ. 2 ರಂದು ಸ. ಉ. ಪ್ರಾ. ಶಾಲೆ ಮಾಲಾಡಿಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ತುಳಸಿ ಹಾಗೂ ಶ್ರೀಮತಿ ಜಯಂತಿ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಎಸ್ ಡಿ ಎಂ ಸಿ ಅಧ್ಯಕ್ಷರಾದ ಹಕೀಮ್ ರವರು ಅಧ್ಯಕ್ಷತೆ ವಹಿಸಿದ್ದರು. ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಡಂತ್ಯಾರು ಇದರ ಅಧ್ಯಕ್ಷರಾದ ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಇವರು ಪ್ರತಿವರ್ಷದಂತೆ ಈ ವರ್ಷವೂ ಎಲ್ಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ನೋಟ್ ಬುಕ್ ಗಳನ್ನು ಉಚಿತವಾಗಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಎಸ್. ಡಿ ಎಂ. ಸಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಲತಾ ಹಾಗೂ ಎಲ್ಲಾ ಎಸ್‌.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು. ಸರಕಾರದಿಂದ ಉಚಿತವಾಗಿ ನೀಡುವ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಲತಾ ಕೆ. ಇವರು ಸ್ವಾಗತಿಸಿ ಇಲಾಖಾ ಮಾಹಿತಿಯನ್ನು ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಜಯರಾಜ್ ಜೈನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಪ್ರಶಾಂತ್ ಕಾಮತ್ ಇವರು ವಂದಿಸಿದರು.

Related posts

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97

Suddi Udaya

ವಾಣಿ ಕಾಲೇಜು: ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಸ್ವಾಗತ-ವಿದಾಯ

Suddi Udaya
error: Content is protected !!