30.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಿಕ್ಷಣ ಸಂಸ್ಥೆ

ಮಾಲಾಡಿ ಸ. ಉ. ಪ್ರಾ.ಶಾಲಾ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಬುಕ್ ಹಾಗೂ ಕೊಡೆ ವಿತರಣೆ

ಮಾಲಾಡಿ: ಜೂ. 2 ರಂದು ಸ. ಉ. ಪ್ರಾ. ಶಾಲೆ ಮಾಲಾಡಿಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ತುಳಸಿ ಹಾಗೂ ಶ್ರೀಮತಿ ಜಯಂತಿ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಎಸ್ ಡಿ ಎಂ ಸಿ ಅಧ್ಯಕ್ಷರಾದ ಹಕೀಮ್ ರವರು ಅಧ್ಯಕ್ಷತೆ ವಹಿಸಿದ್ದರು. ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಡಂತ್ಯಾರು ಇದರ ಅಧ್ಯಕ್ಷರಾದ ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಇವರು ಪ್ರತಿವರ್ಷದಂತೆ ಈ ವರ್ಷವೂ ಎಲ್ಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ನೋಟ್ ಬುಕ್ ಗಳನ್ನು ಉಚಿತವಾಗಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಎಸ್. ಡಿ ಎಂ. ಸಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಲತಾ ಹಾಗೂ ಎಲ್ಲಾ ಎಸ್‌.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು. ಸರಕಾರದಿಂದ ಉಚಿತವಾಗಿ ನೀಡುವ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಲತಾ ಕೆ. ಇವರು ಸ್ವಾಗತಿಸಿ ಇಲಾಖಾ ಮಾಹಿತಿಯನ್ನು ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಜಯರಾಜ್ ಜೈನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಪ್ರಶಾಂತ್ ಕಾಮತ್ ಇವರು ವಂದಿಸಿದರು.

Related posts

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ಡೀನ್ ಗೀತಾ ಬಿ. ಶೆಟ್ಟಿಯವರಿಗೆ ಪಿಎಚ್.ಡಿ

Suddi Udaya

ಉಜಿರೆಯ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದಪ್ರದಾನ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ‘ಸಂಪನ್ನಮ್–2026’ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!