September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಡೆಂಗ್ಯೂ ಜಾಗೃತಿ- ಡಾ. ಕಲಾಮಧು ದಂಪತಿಗಳಿಗೆ ಸನ್ಮಾನ

ಮುಂಡಾಜೆ: ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ಮಾಸಿಕ ಸಭೆಯು ಜೂ.1ರಂದು ತಾಲೂಕು ನಿವೃತ್ತ ವೈದ್ಯಾಧಿಕಾರಿ ಡಾ| ಕಲಾಮಧು ಕಲ್ಯಾಣಿ ಶೆಟ್ಟಿ ಕಲ್ಮಂಜ ಇವರ ಮನೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಡೆಂಗ್ಯೂ ತಡೆಗಟ್ಟುವ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಡಾ. ಕಲಾಮಧು ಉಪಯುಕ್ತವಾದ ಮಾಹಿತಿಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಡಾ.ಕಲಾಮಧು ಮತ್ತು ಅವರ ಧರ್ಮಪತ್ನಿ ಶ್ರೀಮತಿ ಕಲ್ಯಾಣಿ ಶೆಟ್ಟಿ ಇವರು ನೀಡಿದ ಆರೋಗ್ಯ ಹಾಗೂ ಸಾಮಾಜಿಕ ಸೇವೆಗಾಗಿ ದಂಪತಿಯವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾಮ ಸಮಿತಿಯ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಅಗರಿ ಇವರು ಸನ್ಮಾನಿತ ದಂಪತಿಗಳ ಸೇವೆಯನ್ನು ಸ್ಮರಿಸಿದರು. ಸಂಚಾಲಕ ವಿಶ್ವನಾಥ ಶೆಟ್ಟಿ ಮುಂಡ್ರುಪಾಡಿ, ಗೌರವಾಧ್ಯಕ್ಷ ರಾಮಣ್ಣ ಶೆಟ್ಟಿ ಅಗರಿ, ಉಪಾಧ್ಯಕ್ಷ ವಿಜಯಕುಮಾ‌ರ್ ರೈ ಶಾರದಾ ನಗರ, ಇವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಗೌರವ ಸಲಹೆಗಾರರಾದ ಪುಷ್ಪರಾಜ ರೈ ಕಲ್ಲಹಿತ್ತು, ಕೋಶಾಧಿಕಾರಿ ಮಧುಶೆಟ್ಟಿ ಹುರ್ತಾಜೆ, ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ನಾಗಂಡ ಉಪಸ್ಥಿತರಿದ್ದರು.

ಜೊತೆ ಕಾರ್ಯದರ್ಶಿ ನವೀತ್‌ ಶೆಟ್ಟಿ ನಿರೂಪಿಸಿ, ವಂದಿಸಿದರು. ಗ್ರಾಮ ಸಮಿತಿಯ ಬಂಧುಗಳು ಹಾಗೂ ಡಾಕ್ಟರ್ ಕುಟುಂಬದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹಕರಿಸಿದರು.

Related posts

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ತುಳುವ ಭಾಷೆ, ಸಂಸ್ಕೃತಿ ಮತ್ತು ಸೇವಾ ಕಾರ್ಯಗಳಿಗೆ ಸಮರ್ಪಿತ ವ್ಯಕ್ತಿತ್ವ – ದೇವೇಂದ್ರ ಹೆಗ್ಡೆ ಕೊಕ್ರಾಡಿ, ಬೆಂಗಳೂರು ತುಳುವ ಮಹಾಸಭೆಯ ಸಂಚಾಲಕರಾಗಿ ನೇಮಕ

Suddi Udaya

ಕುವೆಟ್ಟು: ಮದ್ದಡ್ಕ ನಿವಾಸಿ ಹೆನ್ರಿ ಡಿಸೋಜ ನಿಧನ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ

Suddi Udaya
error: Content is protected !!