25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಮೊಗ್ರು: ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ

ಮೊಗ್ರು: ಅಲೆಕ್ಕಿ-ಮುಗೇರಡ್ಕ-ಮೊಗ್ರು ಜೈ ಶ್ರೀ ರಾಮ್ ಸೇವಾ ಟ್ರಸ್ಟ್ ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ, ಮಕ್ಕಳ ಹೊರಾಂಗಣ ಆಟಿಕೆ ಮೈದಾನ, ರಾಷ್ಟ್ರಧ್ವಜ ಸ್ತಂಭ, ಭಗವಧ್ವಜ ಕಂಬ, ಶುದ್ಧ ಕುಡಿಯುವ ನೀರಿನ ಪ್ಯೂರಿಫೈಯರ್ ಉದ್ಘಾಟನೆ ಹಾಗೂ ಉಚಿತ ಬ್ಯಾಗ್ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮ ನೆರವೇರಿತು.

ಶಾಸಕ ಹರೀಶ್ ಪೂಂಜ ದೀಪ ಪ್ರಜ್ವಲನೆ ಮಾಡಿ ಧ್ವಜ ಕಂಬ ಉದ್ಘಾಟಿಸಿ ಶುಭಹಾರೈಸಿದರು. ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್ ಮಕ್ಕಳ ಹೊರಾಂಗಣ ಆಟಿಕೆ ಉದ್ಘಾಟಿಸಿದರು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಶುದ್ಧ ಕುಡಿಯುವ ನೀರಿನ ಪ್ಯೂರಿಫೈಯರ್ ಲೋಕಾರ್ಪಣೆಗೊಳಿಸಿದರು.

ಉದಯ ಭಟ್ ಕೊಳಬ್ಬೆ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪದ್ಮುಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ವೆಂಕಟರಮಣ ಭಟ್, ಪುತ್ತೂರು ಕಬಕ ಪುರೋಹಿತ ದೇವರಾತ ಭಟ್, ಪ್ರಗತಿಪರ ಕೃಷಿಕರಾದ ಚಂದ್ರಹಾಸ ಗೌಡ ದೇವಸ್ಯಗುತ್ತು, ದೇವಿಪ್ರಸಾದ್ ಕಡಮ್ಮಾಜೆ ಫಾರ್ಮ್ಸ್, ಬಂದಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಗಂಗಾಧರ ಪೂಜಾರಿ, ಬಂದಾರು ಗ್ರಾಮ ಪಂಚಾಯತ್ ಸದಸ್ಯ ಬಾಲಕೃಷ್ಣ ಗೌಡ ಮುಗೇರಡ್ಕ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಪೋಷಕ ವೃಂದ, ಟ್ರಸ್ಟ್ ಪದಾಧಿಕಾರಿಗಳು ಹಾಗೂ ಮಾತೃ ಮಂಡಳಿ, ಮಾತಾಜಿಯವರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಭರತೇಶ್ ಪುಣ್ಕೆದಡಿ ಸ್ವಾಗತಿಸಿ, ಮಾತಾಜಿ ಪುಷ್ಪಲತಾ ನಿರೂಪಿಸಿ, ಉದಯ ಭಟ್ ಕೊಳಬ್ಬೆ ಧನ್ಯವಾದವಿತ್ತರು.

Related posts

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಪ.ಪೂ. ವಿಜ್ಞಾನ ವಿಭಾಗದ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya

ಶಿರ್ಲಾಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya
error: Content is protected !!