24.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಮೊಗ್ರು: ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ

ಮೊಗ್ರು: ಅಲೆಕ್ಕಿ-ಮುಗೇರಡ್ಕ-ಮೊಗ್ರು ಜೈ ಶ್ರೀ ರಾಮ್ ಸೇವಾ ಟ್ರಸ್ಟ್ ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ, ಮಕ್ಕಳ ಹೊರಾಂಗಣ ಆಟಿಕೆ ಮೈದಾನ, ರಾಷ್ಟ್ರಧ್ವಜ ಸ್ತಂಭ, ಭಗವಧ್ವಜ ಕಂಬ, ಶುದ್ಧ ಕುಡಿಯುವ ನೀರಿನ ಪ್ಯೂರಿಫೈಯರ್ ಉದ್ಘಾಟನೆ ಹಾಗೂ ಉಚಿತ ಬ್ಯಾಗ್ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮ ನೆರವೇರಿತು.

ಶಾಸಕ ಹರೀಶ್ ಪೂಂಜ ದೀಪ ಪ್ರಜ್ವಲನೆ ಮಾಡಿ ಧ್ವಜ ಕಂಬ ಉದ್ಘಾಟಿಸಿ ಶುಭಹಾರೈಸಿದರು. ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್ ಮಕ್ಕಳ ಹೊರಾಂಗಣ ಆಟಿಕೆ ಉದ್ಘಾಟಿಸಿದರು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಶುದ್ಧ ಕುಡಿಯುವ ನೀರಿನ ಪ್ಯೂರಿಫೈಯರ್ ಲೋಕಾರ್ಪಣೆಗೊಳಿಸಿದರು.

ಉದಯ ಭಟ್ ಕೊಳಬ್ಬೆ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪದ್ಮುಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ವೆಂಕಟರಮಣ ಭಟ್, ಪುತ್ತೂರು ಕಬಕ ಪುರೋಹಿತ ದೇವರಾತ ಭಟ್, ಪ್ರಗತಿಪರ ಕೃಷಿಕರಾದ ಚಂದ್ರಹಾಸ ಗೌಡ ದೇವಸ್ಯಗುತ್ತು, ದೇವಿಪ್ರಸಾದ್ ಕಡಮ್ಮಾಜೆ ಫಾರ್ಮ್ಸ್, ಬಂದಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಗಂಗಾಧರ ಪೂಜಾರಿ, ಬಂದಾರು ಗ್ರಾಮ ಪಂಚಾಯತ್ ಸದಸ್ಯ ಬಾಲಕೃಷ್ಣ ಗೌಡ ಮುಗೇರಡ್ಕ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಪೋಷಕ ವೃಂದ, ಟ್ರಸ್ಟ್ ಪದಾಧಿಕಾರಿಗಳು ಹಾಗೂ ಮಾತೃ ಮಂಡಳಿ, ಮಾತಾಜಿಯವರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಭರತೇಶ್ ಪುಣ್ಕೆದಡಿ ಸ್ವಾಗತಿಸಿ, ಮಾತಾಜಿ ಪುಷ್ಪಲತಾ ನಿರೂಪಿಸಿ, ಉದಯ ಭಟ್ ಕೊಳಬ್ಬೆ ಧನ್ಯವಾದವಿತ್ತರು.

Related posts

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

Suddi Udaya

ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ

Suddi Udaya

ಮಲವಂತಿಗೆ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿ ಸಭೆ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

Suddi Udaya
error: Content is protected !!