July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಇಳಂತಿಲ: ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿತ : ಗ್ರಾ.ಪಂ. ಸದಸ್ಯ ತಿಮ್ಮಪ್ಪ ಗೌಡರ ನೇತೃತ್ವದಲ್ಲಿ ತೆರವು ಕಾರ್ಯ

ಇಳಂತಿಲ: ಜೂ.3ರಂದು ಇಳಂತಿಲ ಗ್ರಾಮದ ಹಾರಕೆರೆ ಎಂಬಲ್ಲಿ ವಿಪರೀತ ಮಳೆಗೆ ಮುಖ್ಯ ರಸ್ತೆಗೆ ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿದು ವಾಹನ ಸಂಚಾರ ಸ್ತಗಿತಗೊಂಡಿತ್ತು.

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ತಿಮ್ಮಪ್ಪ ಗೌಡರವರು ಸ್ಥಳಕ್ಕೆ ಭೇಟಿ ನೀಡಿ, ಹಿಟಾಚಿ ಮೂಲಕ ಸ್ಥಳದಲ್ಲಿದ್ದ ಮಣ್ಣು ತೆರವು ಕಾರ್ಯ ಹಾಗೂ ಆ ಸ್ಥಳದ ಡಾಮಾರು ರಸ್ತೆಯಲ್ಲಿ ಕೆಸರಿದ್ದ ಕಾರಣ ದ್ವಿಚಕ್ರ, ತ್ರಿಚಕ್ರ ವಾಹನಕ್ಕೆ ಅಡಚಣೆ ಉಂಟಾಗಿತ್ತು ಇದನ್ನು ಗಮನಿಸಿ ಟ್ಯಾಂಕರ್ ನಲ್ಲಿ ನೀರು ಹಾಯಿಸಿ ರಸ್ತೆಯನ್ನು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಸಹಕರಿದರು.

ಈ ಕಾರ್ಯಕ್ಕೆ ನಾಗರಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.ವಿಪರ್ಯಾಸ ಎಂದರೆ ಹಾನಿ ಸಂಭವಿಸಿದ ಸ್ಥಳಕ್ಕೆ ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷರು, ಅಥವಾ ಸದಸ್ಯರಾಗಲಿ ಭೇಟಿ ನೀಡದೆ ಇರುವುದು ನಾಗರಿಕರ ಕೆಂಗಣ್ಣಿಗೆ ಗುರಿಯಾಗಿದೆ.

Related posts

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

Suddi Udaya

ನಡ: ಪರಾರಿ ನಿವಾಸಿ ಅರುಣ್ ನಿಧನ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಉಜಿರೆ ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಶೇ.99.34 ಫಲಿತಾಂಶ

Suddi Udaya

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25 ರ ಸಂಭ್ರಮ-ಆಕರ್ಷಕ ಆಫರ್: ಇನ್ನೂ ಕೇವಲ 2 ದಿನ ಮಾತ್ರ:

Suddi Udaya

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

Suddi Udaya

ಶಿಬಾಜೆ : ಭಂಡಿಹೊಳೆ ಶ್ರೀಹರಿ ದಾಮಲೆ ನಿಧನ

Suddi Udaya
error: Content is protected !!