23.8 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಓಡಿಲ್ನಾಳ ಶಾಲೆಯಲ್ಲಿ ಅದ್ದೂರಿಯ ಶಾಲಾ ಪ್ರಾರಂಭೋತ್ಸವ

ಓಡಿಲ್ನಾಳ: ಜೂ.2 ರಂದು ಸ. ಉ. ಪ್ರಾ. ಶಾಲೆ ಓಡಿಲ್ನಾಳದಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಬಹಳ ಸಂಭ್ರಮ ಸಡಗರದಿಂದ ನಡೆಸಲಾಯಿತು. ತಳಿರು ತೋರಣಗಳನ್ನು ಕಟ್ಟಿ ಅಲಂಕಾರಗೊಂಡ ನಮ್ಮಿ ಶಾಲೆ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ತಮ್ಮ ದಿವ್ಯ ಉಪಸ್ಥಿತಿಯಲ್ಲಿ, ಶಾಲೆಗೆ ದಾಖಲಾದ ವಿದ್ಯಾರ್ಥಿಗಳಿಗೆ ಗುಲಾಬಿ ಹೂಗಳನ್ನು ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.

ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ಪ್ರಮೀಳಾ ಶೆಟ್ಟಿ ಬಲೂನುಗಳನ್ನು ವಿದ್ಯಾರ್ಥಿಗಳಿಗೆ ನೀಡಿ ಮನರಂಜಿಸಿದರು , ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಉಷಾ.ಪಿ ಇವರು ಕಲಿಕಾ ಪ್ರೇರಣೆಯ ಸಂಕೇತವಾಗಿ ಪೆನ್ಸಿಲ್ ಅನ್ನು ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

ಕುವೆಟ್ಟು ಗ್ರಾ ಪಂ ಸದಸ್ಯರಾದ ಶ್ರೀಮತಿ ಆನಂದಿ ಎಸ್‌ ಡಿ ಎಂ ಸಿ ಸರ್ವ ಸದಸ್ಯರು, ಪೋಷಕರು, ಹಳೇವಿದ್ಯಾರ್ಥಿಗಳ ಸಂಪೂರ್ಣ ಸಹಕಾರದೊಂದಿಗೆ, ವಿದ್ಯಾರ್ಥಿಗಳಿಗೆ ಆರತಿ ಬೆಳಗಿ,ಬ್ಯಾಂಡ್ ವಾದ್ಯಗಳ ಘೋಷಗಳೊಂದಿಗೆ ಶಾಲಾ ಆವರಣದೊಳಗೆ ಕರೆತರಲಾಯಿತು.

ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ಪ್ರಮೀಳಾ ಶೆಟ್ಟಿ ದೀಪವನ್ನು ಪ್ರಜ್ವಲಿಸಿ ಶುಭ ಹಾರೈಸಿದರು. ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಅಧ್ಯಕ್ಷರ ಸಮ್ಮುಖದಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಲಾಯಿತು ಶ್ರೀಮತಿ ಸುಜಾತ ಕಾರ್ಯಕ್ರಮ ನಿರೂಪಿಸಿದರು ಶ್ರೀಮತಿ ಅಕ್ಷತಾ ಧನ್ಯವಾದಗಳು ಕೋರಿದರು.

ಶಿಕ್ಷಕ ವೃಂದ ಹಾಗೂ ಅಡುಗೆ ಸಿಬ್ಬಂದಿಗಳ ಸಹಕಾರದೊಂದಿಗೆ ಕಾರ್ಯಕ್ರಮ ಅತ್ಯುತ್ತಮವಾಗಿ ಸಂಪನ್ನಗೊಂಡಿತು.

Related posts

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

Suddi Udaya

ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಬೃಂದಾವನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯೊಂದಿಗೆಕೋಟಿ ಕೋಟಿ ರಾಮ ಭಕ್ತರ ಅಭಿಲಾಷೆ ಈಡೇರುತ್ತಿದೆ

Suddi Udaya
error: Content is protected !!