July 23, 2026
Uncategorized

ಓಡಿಲ್ನಾಳ ಶಾಲೆಯಲ್ಲಿ ಅದ್ದೂರಿಯ ಶಾಲಾ ಪ್ರಾರಂಭೋತ್ಸವ

ಓಡಿಲ್ನಾಳ: ಜೂ.2 ರಂದು ಸ. ಉ. ಪ್ರಾ. ಶಾಲೆ ಓಡಿಲ್ನಾಳದಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಬಹಳ ಸಂಭ್ರಮ ಸಡಗರದಿಂದ ನಡೆಸಲಾಯಿತು. ತಳಿರು ತೋರಣಗಳನ್ನು ಕಟ್ಟಿ ಅಲಂಕಾರಗೊಂಡ ನಮ್ಮಿ ಶಾಲೆ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ತಮ್ಮ ದಿವ್ಯ ಉಪಸ್ಥಿತಿಯಲ್ಲಿ, ಶಾಲೆಗೆ ದಾಖಲಾದ ವಿದ್ಯಾರ್ಥಿಗಳಿಗೆ ಗುಲಾಬಿ ಹೂಗಳನ್ನು ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.

ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ಪ್ರಮೀಳಾ ಶೆಟ್ಟಿ ಬಲೂನುಗಳನ್ನು ವಿದ್ಯಾರ್ಥಿಗಳಿಗೆ ನೀಡಿ ಮನರಂಜಿಸಿದರು , ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಉಷಾ.ಪಿ ಇವರು ಕಲಿಕಾ ಪ್ರೇರಣೆಯ ಸಂಕೇತವಾಗಿ ಪೆನ್ಸಿಲ್ ಅನ್ನು ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

ಕುವೆಟ್ಟು ಗ್ರಾ ಪಂ ಸದಸ್ಯರಾದ ಶ್ರೀಮತಿ ಆನಂದಿ ಎಸ್‌ ಡಿ ಎಂ ಸಿ ಸರ್ವ ಸದಸ್ಯರು, ಪೋಷಕರು, ಹಳೇವಿದ್ಯಾರ್ಥಿಗಳ ಸಂಪೂರ್ಣ ಸಹಕಾರದೊಂದಿಗೆ, ವಿದ್ಯಾರ್ಥಿಗಳಿಗೆ ಆರತಿ ಬೆಳಗಿ,ಬ್ಯಾಂಡ್ ವಾದ್ಯಗಳ ಘೋಷಗಳೊಂದಿಗೆ ಶಾಲಾ ಆವರಣದೊಳಗೆ ಕರೆತರಲಾಯಿತು.

ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ಪ್ರಮೀಳಾ ಶೆಟ್ಟಿ ದೀಪವನ್ನು ಪ್ರಜ್ವಲಿಸಿ ಶುಭ ಹಾರೈಸಿದರು. ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಅಧ್ಯಕ್ಷರ ಸಮ್ಮುಖದಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಲಾಯಿತು ಶ್ರೀಮತಿ ಸುಜಾತ ಕಾರ್ಯಕ್ರಮ ನಿರೂಪಿಸಿದರು ಶ್ರೀಮತಿ ಅಕ್ಷತಾ ಧನ್ಯವಾದಗಳು ಕೋರಿದರು.

ಶಿಕ್ಷಕ ವೃಂದ ಹಾಗೂ ಅಡುಗೆ ಸಿಬ್ಬಂದಿಗಳ ಸಹಕಾರದೊಂದಿಗೆ ಕಾರ್ಯಕ್ರಮ ಅತ್ಯುತ್ತಮವಾಗಿ ಸಂಪನ್ನಗೊಂಡಿತು.

Related posts

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

Suddi Udaya

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ: ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಮಾದಕ ವ್ಯಸನದ ಬಗ್ಗೆ ಜನಜಾಗೃತಿ ಮೂಡಿಸುವ ಮಹತ್ವದ ಉದ್ದೇಶ- ಉಜಿರೆಯಲ್ಲಿ ಮೊದಲ ಬಾರಿಗೆಯಶಸ್ವಿಯಾಗಿ ನಡೆದ ರೈನಥಾನ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ ಶಿಪ್

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya
error: Content is protected !!