30.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕಳೆಂಜ: “ಸೇವೆಯ ಹೊಸ ಹಾದಿಯಲ್ಲಿ ಹೊಸ ಹೆಜ್ಜೆ” ಎಂಬ ಘೋಷವಾಕ್ಯದೊಂದಿಗೆ, ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಸ್ಥೆಯ 2025-2028ನೇ ಅವಧಿಗೆ ಆಯ್ಕೆಯಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕಳೆಂಜ ಚರ್ಚ್ ಹಾಲ್‌ನಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಸಂಸ್ಥೆಯ ಹಿರಿಯ ಸದಸ್ಯರಾದ ಅಗಸ್ಟೀನ್ ಟಿ.ಎ. ಅಧಿಕಾರ ಸ್ವೀಕರಿಸಿದರು. ಶಿಜೋ ಜೋಸೆಫ್ ಕಾರ್ಯದರ್ಶಿಯಾಗಿ, ಮ್ಯಾಥ್ಯೂ ವಿ.ಟಿ. ಉಪಾಧ್ಯಕ್ಷರಾಗಿ ಹಾಗೂ ರಂಜಿತ್ ಪಿ.ಎಸ್. ಕೋಶಾಧಿಕಾರಿಯಾಗಿ ಜವಾಬ್ದಾರಿ ಸ್ವೀಕರಿಸಿದರು.

ಸಂಸ್ಥೆಯ ಮಾರ್ಗದರ್ಶಕ ಸೆಬಾಸ್ಟಿಯನ್ ಪಿ.ಟಿ. ಅವರನ್ನು ಗೌರವಾಧ್ಯಕ್ಷರಾಗಿ, ಮತ್ತು ಜೋಸೆಫ್ ಕೆ.ಡಿ. ಅವರನ್ನು ಗೌರವ ಸಲಹೆಗಾರರಾಗಿ ನೇಮಕ ಮಾಡಲಾಯಿತು.

ನೂತನ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ತೋಮಸ್.ಪಿ.ಡಿ, ಶಾಜಿ ತೋಮಸ್, ಮ್ಯಾಥ್ಯು ಕೆ.ಕೆ, ಜಿಬಿನ್ ಜೋಸೆಫ್, ಸೋನಿ ಪಿ.ಟಿ., ಟೋಮಿ ಕೆ.ಕೆ., ಜೋಸೆಫ್ ಎ.ಎ, ಶಿಂಡೋ ಜೇಕಬ್, ಜಯೇಶ್ ಕೆ.ಯಂ., ಜೋರ್ಜ್ ಟಿ.ಜಿ, ಸಂತೋಷ್ ಕೆ.ಇ, ತೋಮಸ್ ಕೆ.ಡಿ ಕಾರ್ಯನಿರ್ವಹಿಸಲಿದ್ದು ಹಳೆಯ ಪದಾಧಿಕಾರಿಗಳ ಶ್ರಮಕ್ಕೆ ಕೃತಜ್ಞತೆ ಸಲ್ಲಿಸಿ, ಹೊಸ ತಂಡದ ಪದಾಧಿಕಾರಿಗಳಿಗೆ ಸದಸ್ಯರು ಶುಭ ಹಾರೈಸಿದರು ಕಾರ್ಯಕ್ರಮದಲ್ಲಿ, ಸದಸ್ಯರು ಮತ್ತು ಸ್ಥಳೀಯ ಗಣ್ಯ ವ್ಯಕ್ತಿಗಳು ಪಾಲ್ಗೊಂಡಿದ್ದರು
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಚರ್ಚಿನ ಧರ್ಮಗುರು ರೇ. ಫಾ. ಸುನಿಲ್ ಪೂವತಿಂಗಲ್ ಮಾತನಾಡಿ ಸಂಸ್ಥೆಯ ಹೊಸ ತಂಡ ನೈಜ ಸೇವಾ ಕಾರ್ಯಗಳಲ್ಲಿ ಮುಂದುವರಿಯಲಿದ್ದು, ಸಮಾಜಮುಖಿ ಚಟುವಟಿಕೆಗಳಲ್ಲಿ ದಿಟ್ಟ ಹೆಜ್ಜೆ ಇಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಜನಾರ್ದನ್, ಮಾತನಾಡಿ ನೂತನ ಅಧ್ಯಕ್ಷರ ನೇತೃತ್ವದಲ್ಲಿ ಇನ್ನಷ್ಟು ಜನಪರ ಕಾರ್ಯಕ್ರಮಗಳು ನಡೆಯಲಿವೆ ಎಂಬ ಆಶಾವಾದ ವ್ಯಕ್ತಪಡಿಸಿದರು.

ಪ್ರದೀಪ್ ಕೆ.ಜೆ. ಸ್ವಾಗತಿಸಿ, ಡಾರ್ವಿನ್ ಕಾರ್ಯಕ್ರಮ ನಿರೂಪಿಸಿ ಶಾಜಿ ತೋಮಸ್ ವಂದಿಸಿದರು.

Related posts

ಹೊಸಂಗಡಿ ಗ್ರಾ. ಪಂ. ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ದ್ವಿತೀಯ ಪಿಯು ಫಲಿತಾಂಶ: ಅರಸಿನಮಕ್ಕಿ ಪದವಿ ಪೂರ್ವ ಕಾಲೇಜಿಗೆ ಶೇ. 84.6 ಫಲಿತಾಂಶ

Suddi Udaya

ಪೆರೋಡಿತ್ತಾಯಕಟ್ಟೆ ಸ. ಉ. ಪ್ರಾ. ಶಾಲಾ ಮೂವರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

Suddi Udaya

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪ್ರಯೋಗಾಲಯ ಉಪಕರಣಗಳ ಹಸ್ತಾಂತರ ಮತ್ತು ಪ್ರತಿಭಾ ಪುರಸ್ಕಾರ

Suddi Udaya
error: Content is protected !!