July 23, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

ನಾಳ: ನಾಳ ನ್ಯಾಯತರ್ಪು ಗ್ರಾಮದ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ ಜೂ.3ರಂದು ಜರುಗಿತು.

ಸುಮಾರು ಅಂದಾಜು ೯೦೦ ವರ್ಷಗಳಿಗೂ ಹೆಚ್ಚಿನ ಇತಿಹಾಸ ಪ್ರಸಿದ್ಧ ದೇವಸ್ಥಾನವು ನ್ಯಾಯತರ್ಪು, ಕಳಿಯ ಹಾಗೂ ಓಡಿಲ್ನಾಳ ಗ್ರಾಮದ ಭಕ್ತಾದಿಗಳು ಆರಾಧನೆ ಮೂಲಕ ವಿವಿಧ ಕಾರ್ಯಕ್ರಮಗಳು ನಡೆಯುತ್ತದೆ ಬರುತ್ತಿದೆ.

ಭತ್ತದ ಬೇಸಾಯ ಮರೆಮಾಚುತ್ತಿದ್ದು ಭಾದ್ರಪದ ಮಾಸದಲ್ಲಿ ದೇವಸ್ಥಾನಗಳಿಗೆ, ದೈವಸ್ಥಾನ ಹಾಗೂ ಹಿಂದುಗಳು ತನೆ ಕಟ್ಟುವುದು ಮತ್ತು ಹೊಸ ಆಕ್ಕಿ ಊಟ ಆಚರಣೆ ನಡೆಯುತ್ತದೆ. ಈ ಸಂದರ್ಭದಲ್ಲಿ ತೆನೆ ಅಗತ್ಯವಾಗಿದೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ಭತ್ತದ ಬೇಸಾಯ ಕೃಷಿ ಬೆಳೆಸುವುದು ಅನಿವಾರ್ಯ ವಾಗಿದೆ ಎಂದು ಹಿರಿಯರು ಬೇಸರ ವ್ಯಕ್ತ ಪಡಿಸುತ್ತಿದ್ದಾರೆ.

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ., ಸದಸ್ಯರಾದ ರಾಘವ ಹೆಚ್. ಹರೀಶ್ ಗೌಡ, ರೀತಾ ಚಂದ್ರಶೇಖರ್, ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು, ಮಾಜಿ ಸದಸ್ಯ ರಾಜೇಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಎಂ., ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಭಜನಾ ಮಂಡಳಿ ಅಧ್ಯಕ್ಷ ಗಣೇಶ್ ಬಿ., ಶ್ರೀದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ಮಮತಾ ಆಳ್ವ, ಪ್ರಬಂಧಕ ಗಿರೀಶ್ ಶೆಟ್ಟಿ, ಅಡ್ಡಕೊಡಂಗೆ, ಹಿರಿಯರಾದ ಪೂವಪ್ಪ ಶೆಟ್ಟಿ, ಉಮಾನಾಥ ಶೆಟ್ಡಿ ಕುಲ್ಲುಂಜ, ಉಮೇಶ್ ಶೆಟ್ಟಿ ಸಂಬೋಳ್ಯ, ಭಕ್ತಾದಿಗಳು ಮತ್ತಿತರರಿದ್ದರು.

ಕೃಷಿಕ ಕುಲ್ಲುಂಜ ನಿವಾಸಿ ಉಮನಾಥ ಶೆಟ್ಟಿ ಸ್ವತಃ ಭತ್ತದ ಬೀಜ ಬಿತ್ತನೆ ಮಾಡಿ ನೇಜಿ ತಯಾರಿಸಿ ಪ್ರತಿ ವರ್ಷದಂತೆ ದೇವಸ್ಥಾನಕ್ಕೆ ಉಚಿತವಾಗಿ ನೀಡಿದರು.

Related posts

ಕರಾವಳಿ ಪ್ರಜಾ ಧ್ವನಿ ಯಾತ್ರೆ ಅಳದಂಗಡಿ ಬೃಹತ್ ಸಾರ್ವಜನಿಕ ಸಭೆ

Suddi Udaya

ಭಗವದ್ಗೀತೆಯ ಕಂಠಪಾಠ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದ ಕುಮಾರಿ ಅದ್ವಿತಿ ರಾವ್ ರವರಿಗೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಭೇಟಿ

Suddi Udaya

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ “ಪಂಜಿನ ಮೆರವಣಿಗೆ”

Suddi Udaya

ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಬಾಲಚಂದ್ರ ರವರಿಗೆ ಸಹಾಯಧನ ಹಸ್ತಾಂತರ

Suddi Udaya
error: Content is protected !!