24.4 C
ಪುತ್ತೂರು, ಬೆಳ್ತಂಗಡಿ
June 6, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೆಲ್ಯಾಡಿ ಅಮ್ಮ ಕ್ಯಾಂಟೀನ್ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ: ನೆಲ್ಯಾಡಿಯ ಹೃದಯಭಾಗದಲ್ಲಿ ಕಾರ್ಯಾಚರಿಸುತ್ತಿದ್ದ ‘ಅಮ್ಮ ಕ್ಯಾಂಟೀನ್’ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ (38ವ) ಜೂ.2ರಂದು ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲತಃ ಪಾರೆಂಕಿ ಗ್ರಾಮದ ಮಡಂತ್ಯಾರ್ ಬಳಿಯ ದಡ್ಡು ನಿವಾಸಿಯಾಗಿರುವ ಗಿರೀಶ್, ಕಳೆದ 7 ವರ್ಷಗಳಿಂದ ನೆಲ್ಯಾಡಿಯಲ್ಲಿ ‘ಅಮ್ಮ ಕ್ಯಾಂಟೀನ್’ ನಡೆಸುತ್ತಿದ್ದರು. ಸರಳತೆ, ಶುದ್ಧ ಆಹಾರ, ಹಾಗೂ ನಿಜವಾದ ಸೇವಾಭಾವನೆಗಾಗಿ ಪ್ರಸಿದ್ಧಿ ಪಡೆದಿದ್ದ ಈ ಕ್ಯಾಂಟೀನ್ ಸ್ಥಳೀಯರ ವಿಶ್ವಾಸ ಗಳಿಸಿತ್ತು. ಗಿರೀಶ್ ಅವರು ಪತ್ನಿ ಮತ್ತು ಒಂದು ಮಗು ಜೊತೆಗೆ ನೆಲ್ಯಾಡಿ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಶನಿವಾರ ದಂದು ಅವರು ತಮ್ಮ ಮೂಲ ಮನೆಗೆ ಹೋಗಿದ್ದು, ಅಲ್ಲಿ ಸೋಮವಾರ ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರಿಗೆ ಪತ್ನಿ, ಪುತ್ರ, ತಾಯಿ ಹಾಗೂ ಸಹೋದರ-ಸಹೋದರಿಯರು ಇದ್ದಾರೆ.

Related posts

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

Suddi Udaya

ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

Suddi Udaya

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya
error: Content is protected !!