30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೆಲ್ಯಾಡಿ ಅಮ್ಮ ಕ್ಯಾಂಟೀನ್ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ: ನೆಲ್ಯಾಡಿಯ ಹೃದಯಭಾಗದಲ್ಲಿ ಕಾರ್ಯಾಚರಿಸುತ್ತಿದ್ದ ‘ಅಮ್ಮ ಕ್ಯಾಂಟೀನ್’ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ (38ವ) ಜೂ.2ರಂದು ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲತಃ ಪಾರೆಂಕಿ ಗ್ರಾಮದ ಮಡಂತ್ಯಾರ್ ಬಳಿಯ ದಡ್ಡು ನಿವಾಸಿಯಾಗಿರುವ ಗಿರೀಶ್, ಕಳೆದ 7 ವರ್ಷಗಳಿಂದ ನೆಲ್ಯಾಡಿಯಲ್ಲಿ ‘ಅಮ್ಮ ಕ್ಯಾಂಟೀನ್’ ನಡೆಸುತ್ತಿದ್ದರು. ಸರಳತೆ, ಶುದ್ಧ ಆಹಾರ, ಹಾಗೂ ನಿಜವಾದ ಸೇವಾಭಾವನೆಗಾಗಿ ಪ್ರಸಿದ್ಧಿ ಪಡೆದಿದ್ದ ಈ ಕ್ಯಾಂಟೀನ್ ಸ್ಥಳೀಯರ ವಿಶ್ವಾಸ ಗಳಿಸಿತ್ತು. ಗಿರೀಶ್ ಅವರು ಪತ್ನಿ ಮತ್ತು ಒಂದು ಮಗು ಜೊತೆಗೆ ನೆಲ್ಯಾಡಿ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಶನಿವಾರ ದಂದು ಅವರು ತಮ್ಮ ಮೂಲ ಮನೆಗೆ ಹೋಗಿದ್ದು, ಅಲ್ಲಿ ಸೋಮವಾರ ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರಿಗೆ ಪತ್ನಿ, ಪುತ್ರ, ತಾಯಿ ಹಾಗೂ ಸಹೋದರ-ಸಹೋದರಿಯರು ಇದ್ದಾರೆ.

Related posts

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ಹನುಮಾನ್ ಟೂರ್ ಆ್ಯಂಡ್ ಟ್ರಾವೆಲ್ಸ್ ಮಾಲಕ ರಾಮಕೃಷ್ಣ ನಿಧನ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya
error: Content is protected !!