July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೆಲ್ಯಾಡಿ ಅಮ್ಮ ಕ್ಯಾಂಟೀನ್ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ: ನೆಲ್ಯಾಡಿಯ ಹೃದಯಭಾಗದಲ್ಲಿ ಕಾರ್ಯಾಚರಿಸುತ್ತಿದ್ದ ‘ಅಮ್ಮ ಕ್ಯಾಂಟೀನ್’ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ (38ವ) ಜೂ.2ರಂದು ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲತಃ ಪಾರೆಂಕಿ ಗ್ರಾಮದ ಮಡಂತ್ಯಾರ್ ಬಳಿಯ ದಡ್ಡು ನಿವಾಸಿಯಾಗಿರುವ ಗಿರೀಶ್, ಕಳೆದ 7 ವರ್ಷಗಳಿಂದ ನೆಲ್ಯಾಡಿಯಲ್ಲಿ ‘ಅಮ್ಮ ಕ್ಯಾಂಟೀನ್’ ನಡೆಸುತ್ತಿದ್ದರು. ಸರಳತೆ, ಶುದ್ಧ ಆಹಾರ, ಹಾಗೂ ನಿಜವಾದ ಸೇವಾಭಾವನೆಗಾಗಿ ಪ್ರಸಿದ್ಧಿ ಪಡೆದಿದ್ದ ಈ ಕ್ಯಾಂಟೀನ್ ಸ್ಥಳೀಯರ ವಿಶ್ವಾಸ ಗಳಿಸಿತ್ತು. ಗಿರೀಶ್ ಅವರು ಪತ್ನಿ ಮತ್ತು ಒಂದು ಮಗು ಜೊತೆಗೆ ನೆಲ್ಯಾಡಿ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಶನಿವಾರ ದಂದು ಅವರು ತಮ್ಮ ಮೂಲ ಮನೆಗೆ ಹೋಗಿದ್ದು, ಅಲ್ಲಿ ಸೋಮವಾರ ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರಿಗೆ ಪತ್ನಿ, ಪುತ್ರ, ತಾಯಿ ಹಾಗೂ ಸಹೋದರ-ಸಹೋದರಿಯರು ಇದ್ದಾರೆ.

Related posts

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದಿಂದ ಮನೆ ದುರಸ್ತಿ ಕಾರ್ಯ

Suddi Udaya

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ನ 585 ಸೇವಾ ಯೋಜನೆಯ ಬೃಹತ್ ಉಚಿತ ಹೃದಯ ತಪಾಸಣೆ ಶಿಬಿರ

Suddi Udaya

ವಾಣಿ ವಿದ್ಯಾ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನಾಚರಣೆ

Suddi Udaya

ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya
error: Content is protected !!