September 6, 2026
Uncategorized

ಬೆಳ್ತಂಗಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯಿಂದ ನೆರವು

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ರೂ. ೨.೫೦ ಲಕ್ಷ ಅನುದಾನವನ್ನು ಮಂಜೂರುಗೊಳಿಸಿದ್ದಾರೆ.

ಇದರಲ್ಲಿ ರು.೧,೫೧,೬೩೦ ಮೊತ್ತ ಸಿಲಿಕಾನ್ ಛೇಂಬರ್‌ಗೆ ಹಾಗೂ ರೂ.೯೮,೩೭೦ ರುದ್ರಭೂಮಿ ನಿರ್ಮಾಣಕ್ಕೆ ಧನ ಸಹಾಯವಾಗಿದ್ದು, ಧರ್ಮಸ್ಥಳದಿಂದ ಮಂಜೂರಾದ ಅನುದಾನದ ಚೆಕ್ಕನ್ನು ಜೂ.೨ರಂದು ನಡೆದ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಅವರ ಮೂಲಕ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡರಿಗೆ ಯೋಜನಾಧಿಕಾರಿ ಯೋಧರ ಅವರು ಹಸ್ತಾಂತರಿಸಲಾಯಿತು.

ಈ ಸಂದರ್ಭ ಲಾಯಿಲ ವಲಯ ಮೇಲ್ವಿಚಾರಕ ಸುಶಾಂತ್, ಕೇಂದ್ರ ಒಕ್ಕೂಟ ಅಧ್ಯಕ್ಷ ಸೀತಾರಾಮ್ ಆರ್., ಒಕ್ಕೂಟ ಪದಾಧಿಕಾರಿಗಳಾದ ದಯಾನಂದ್ ಕೋಟ್ಯಾನ್, ಯಶೋಧಾ, ಪ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಮುಖ್ಯಾಧಿಕಾರಿ ರಾಜೇಶ್ ಉಪಸ್ಥಿತರಿದ್ದರು.

Related posts

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ ಮಕ್ಕಳಿಗೆ ಪಿಂಕ್ (ಸಖೀ) ಬೂತ್ ನ ಪರಿಕಲ್ಪನೆಯ ಪಾಠ

Suddi Udaya

ಅರಸಿನಮಕ್ಕಿ: ಪುರೋಹಿತ ಅನಂತ ವೀರೇಶ್ವರ ತಾಮ್ಹನ್ಕಾರ್ ನಿಧನ

Suddi Udaya

ಚಲಿಸುತ್ತಿದ್ದ ಲಾರಿಯ ಬೋಲ್ಟ್ ಕಟ್: ಚಾಲಕನ ಮುಂಜಾಗ್ರತೆಯಿಂದ ತಪ್ಪಿದಅನಾಹುತ

Suddi Udaya

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ನ .29: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು

Suddi Udaya
error: Content is protected !!