24.1 C
ಪುತ್ತೂರು, ಬೆಳ್ತಂಗಡಿ
June 7, 2025
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ವರದಿ

ಶಿಬಾಜೆ: ರಸ್ತೆಗೆ ಅಡ್ಡಲಾಗಿ ಇಟ್ಟಿಗೆ ಇಟ್ಟ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಾಯ ಆರೋಪಿ ವಿರುದ್ಧ ಪ್ರಕರಣ ದಾಖಲು

ಶಿಬಾಜೆ: ರಸ್ತೆಗೆ ಅಡ್ಡಲಾಗಿ ಸಣ್ಣ ಇಟ್ಟಿಗೆಯನ್ನು ಇಟ್ಟು ಅದಕ್ಕೆ ಗೋಣಿಚೀಲ ಹಾಕಿ ಯಾವುದೇ ಸೂಚನಾ ಫಲಕ ಇಡದೆ ರಸ್ತೆಯನ್ನು ಮುಚ್ಚಿದ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಶಿಬಾಜೆಯ ಅಭಿಲಾಷ್ ಗಾಯಗೊಂಡ ಪ್ರಕರಣ ಸಂಬಂಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಚಾಲಕ ನೀಡಿದ ದೂರಿನ ಮೇರೆಗೆ ಜೂ. 2 ರಂದು ಆರೋಪಿ ಶಿಬಾಜೆಯ ಕುರುಂಬು ನಿವಾಸಿ ಧರ್ಣಪ್ಪ ಗೌಡ ವಿರುದ್ಧ (BNS) 2023(u/s -285,125(a)) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ: ಜೂನ್ 1 ರಂದು ಚಾಲಕ ಶಿಬಾಜೆಯ ಅಭಿಲಾಷ್ ತನ್ನ ಆಟೋ ರಿಕ್ಷಾ (KA-70-8816) ದಲ್ಲಿ ಶಿಬಾಜೆ ಕಡೆಯಿಂದ ಅರಸಿನಮಕ್ಕಿ ಕಡೆಗೆ ಸುಮಾರು ರಾತ್ರಿ 8:49 ಗಂಟೆಗೆ ಚಲಾಯಿಸಿಕೊಂಡು ಹೋಗುತ್ತಿರುವ ಸಮಯದಲ್ಲಿ ಬೆಳ್ತಂಗಡಿ ತಾಲೂಕು ಶಿಬಾಜೆ ಗ್ರಾಮದ ಕುರುಂಬು ಎಂಬಲ್ಲಿಗೆ ತಲುಪುತ್ತಿದಂತೆ ಅಭಿಲಾಷ್ ಚಲಾಯಿಸುತ್ತಿದ್ದ ರಸ್ತೆಯಲ್ಲಿ ಶಿಬಾಜೆ ಗ್ರಾಮದ ಕುರುಂಬು ನಿವಾಸಿ ಧರ್ಣಪ್ಪ ಗೌಡ ಎಂಬುವರು ರಸ್ತೆಯ ಮಧ್ಯಭಾಗದಲ್ಲಿ ಸಣ್ಣ ಇಟ್ಟಿಗೆಯನ್ನು ಇಟ್ಟು ಅದರ ಮೇಲೆ ಗೋಣಿಚೀಲವನ್ನು ಹಾಕಿ ಯಾವುದೇ ಸೂಚನಾ ಫಲಕ ಇಡದೇ ರಸ್ತೆಯನ್ನು ಮುಚ್ಚಿದ ಪರಿಣಾಮ ಅಭಿಲಾಷ್ ತನ್ನ ಬಾಬು ಆಟೋರಿಕ್ಷಾದ ಚಾಲನಾ ನಿಯಂತ್ರಣ ತಪ್ಪಿ ಒಮ್ಮೆಲೆ ಆಟೋರಿಕ್ಷಾ ಸಮೇತ ರಸ್ತೆಗೆ ಬಲಮಗ್ಗುಲಾಗಿ ಬಿದ್ದ ಕೂಡಲೇ ಅಭಿಲಾಷ್ ಅವರ ತಮ್ಮನಿಗೆ ದೂರವಾಣಿ ಕರೆ ಮೂಲಕ ಅಪಘಾತವಾದ ಬಗ್ಗೆ ತಿಳಿಸಿದ ತಕ್ಷಣ ಅವರ ತಮ್ಮ ಅನೀಷ್ ಎಂಬುವರು ಅಪಘಾತ ಸ್ಥಳಕ್ಕೆ ಬಂದು ಗಾಯಗೊಂಡ ಅಭಿಲಾಷ್ ನನ್ನು ಎತ್ತಿ ಉಪಚರಿಸಿ ಬಲಕಾಲಿನ ಮೊಣಕಾಲೆಗೆ ರಕ್ತಗಾಯ ಬಲಕಾಲಿನ ಮಣಿಗಂಟೆಗೆ ರಕ್ತಗಾಯ ಹಾಗೂ ಬಲ ಕಿಬ್ಯೂಟಿಗೆ ತರಚಿದ ಗಾಯವಾದವರನ್ನು ಚಿಕಿತ್ಸೆ ಬಗ್ಗೆ ಉಜಿರೆಯ SDM ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Related posts

ಕೊಕ್ರಾಡಿ: ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya

ಬೆಳ್ತಂಗಡಿ : ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಮಾಲಕ, ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಅವರಿಗೆ ರಾಷ್ಟ್ರಮಟ್ಟದ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ. ಗ್ರಾ. ಯೋಜನೆ ತಾಲೂಕು ಮಹಿಳಾ ಜ್ಞಾನವಿಕಾಸ ನೇತೃತ್ವದ್ಲಲಿ ಸೃಜನಶೀಲ ಕಾರ್ಯಕ್ರಮ

Suddi Udaya

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya
error: Content is protected !!