30.7 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಇಳಂತಿಲ: ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿತ : ಗ್ರಾ.ಪಂ. ಸದಸ್ಯ ತಿಮ್ಮಪ್ಪ ಗೌಡರ ನೇತೃತ್ವದಲ್ಲಿ ತೆರವು ಕಾರ್ಯ

ಇಳಂತಿಲ: ಜೂ.3ರಂದು ಇಳಂತಿಲ ಗ್ರಾಮದ ಹಾರಕೆರೆ ಎಂಬಲ್ಲಿ ವಿಪರೀತ ಮಳೆಗೆ ಮುಖ್ಯ ರಸ್ತೆಗೆ ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿದು ವಾಹನ ಸಂಚಾರ ಸ್ತಗಿತಗೊಂಡಿತ್ತು.

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ತಿಮ್ಮಪ್ಪ ಗೌಡರವರು ಸ್ಥಳಕ್ಕೆ ಭೇಟಿ ನೀಡಿ, ಹಿಟಾಚಿ ಮೂಲಕ ಸ್ಥಳದಲ್ಲಿದ್ದ ಮಣ್ಣು ತೆರವು ಕಾರ್ಯ ಹಾಗೂ ಆ ಸ್ಥಳದ ಡಾಮಾರು ರಸ್ತೆಯಲ್ಲಿ ಕೆಸರಿದ್ದ ಕಾರಣ ದ್ವಿಚಕ್ರ, ತ್ರಿಚಕ್ರ ವಾಹನಕ್ಕೆ ಅಡಚಣೆ ಉಂಟಾಗಿತ್ತು ಇದನ್ನು ಗಮನಿಸಿ ಟ್ಯಾಂಕರ್ ನಲ್ಲಿ ನೀರು ಹಾಯಿಸಿ ರಸ್ತೆಯನ್ನು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಸಹಕರಿದರು.

ಈ ಕಾರ್ಯಕ್ಕೆ ನಾಗರಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.ವಿಪರ್ಯಾಸ ಎಂದರೆ ಹಾನಿ ಸಂಭವಿಸಿದ ಸ್ಥಳಕ್ಕೆ ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷರು, ಅಥವಾ ಸದಸ್ಯರಾಗಲಿ ಭೇಟಿ ನೀಡದೆ ಇರುವುದು ನಾಗರಿಕರ ಕೆಂಗಣ್ಣಿಗೆ ಗುರಿಯಾಗಿದೆ.

Related posts

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Suddi Udaya

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

Suddi Udaya

3ನೇ ಹಂತದ ಪಿಎಂಶ್ರೀ ಯೋಜನೆಗೆ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆ ಆಯ್ಕೆ

Suddi Udaya

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya
error: Content is protected !!