25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಇಳಂತಿಲ: ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿತ : ಗ್ರಾ.ಪಂ. ಸದಸ್ಯ ತಿಮ್ಮಪ್ಪ ಗೌಡರ ನೇತೃತ್ವದಲ್ಲಿ ತೆರವು ಕಾರ್ಯ

ಇಳಂತಿಲ: ಜೂ.3ರಂದು ಇಳಂತಿಲ ಗ್ರಾಮದ ಹಾರಕೆರೆ ಎಂಬಲ್ಲಿ ವಿಪರೀತ ಮಳೆಗೆ ಮುಖ್ಯ ರಸ್ತೆಗೆ ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿದು ವಾಹನ ಸಂಚಾರ ಸ್ತಗಿತಗೊಂಡಿತ್ತು.

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ತಿಮ್ಮಪ್ಪ ಗೌಡರವರು ಸ್ಥಳಕ್ಕೆ ಭೇಟಿ ನೀಡಿ, ಹಿಟಾಚಿ ಮೂಲಕ ಸ್ಥಳದಲ್ಲಿದ್ದ ಮಣ್ಣು ತೆರವು ಕಾರ್ಯ ಹಾಗೂ ಆ ಸ್ಥಳದ ಡಾಮಾರು ರಸ್ತೆಯಲ್ಲಿ ಕೆಸರಿದ್ದ ಕಾರಣ ದ್ವಿಚಕ್ರ, ತ್ರಿಚಕ್ರ ವಾಹನಕ್ಕೆ ಅಡಚಣೆ ಉಂಟಾಗಿತ್ತು ಇದನ್ನು ಗಮನಿಸಿ ಟ್ಯಾಂಕರ್ ನಲ್ಲಿ ನೀರು ಹಾಯಿಸಿ ರಸ್ತೆಯನ್ನು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಸಹಕರಿದರು.

ಈ ಕಾರ್ಯಕ್ಕೆ ನಾಗರಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.ವಿಪರ್ಯಾಸ ಎಂದರೆ ಹಾನಿ ಸಂಭವಿಸಿದ ಸ್ಥಳಕ್ಕೆ ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷರು, ಅಥವಾ ಸದಸ್ಯರಾಗಲಿ ಭೇಟಿ ನೀಡದೆ ಇರುವುದು ನಾಗರಿಕರ ಕೆಂಗಣ್ಣಿಗೆ ಗುರಿಯಾಗಿದೆ.

Related posts

ಕೊಯ್ಯೂರು: ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆ

Suddi Udaya

ಬೆಳ್ತಂಗಡಿ : ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ನೇಮಕ

Suddi Udaya

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ರಾಜ್ಯ ಮಟ್ಟದಲ್ಲಿ ಕಪ್ಪು ಪಟ್ಟಿ ಧರಿಸಿ ಪಂಚಾಯತ್ ನೌಕರರ ಮುಂದುವರಿದ ಪ್ರತಿಭಟನೆ : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ನೀಡುವುದಾಗಿ ವಿಧಾನಸಭಾಧ್ಯಕ್ಷರ ಭರವಸೆ

Suddi Udaya
error: Content is protected !!