September 6, 2026
Uncategorized

ಓಡಿಲ್ನಾಳ ಶಾಲೆಯಲ್ಲಿ ಅದ್ದೂರಿಯ ಶಾಲಾ ಪ್ರಾರಂಭೋತ್ಸವ

ಓಡಿಲ್ನಾಳ: ಜೂ.2 ರಂದು ಸ. ಉ. ಪ್ರಾ. ಶಾಲೆ ಓಡಿಲ್ನಾಳದಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಬಹಳ ಸಂಭ್ರಮ ಸಡಗರದಿಂದ ನಡೆಸಲಾಯಿತು. ತಳಿರು ತೋರಣಗಳನ್ನು ಕಟ್ಟಿ ಅಲಂಕಾರಗೊಂಡ ನಮ್ಮಿ ಶಾಲೆ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ತಮ್ಮ ದಿವ್ಯ ಉಪಸ್ಥಿತಿಯಲ್ಲಿ, ಶಾಲೆಗೆ ದಾಖಲಾದ ವಿದ್ಯಾರ್ಥಿಗಳಿಗೆ ಗುಲಾಬಿ ಹೂಗಳನ್ನು ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.

ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ಪ್ರಮೀಳಾ ಶೆಟ್ಟಿ ಬಲೂನುಗಳನ್ನು ವಿದ್ಯಾರ್ಥಿಗಳಿಗೆ ನೀಡಿ ಮನರಂಜಿಸಿದರು , ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಉಷಾ.ಪಿ ಇವರು ಕಲಿಕಾ ಪ್ರೇರಣೆಯ ಸಂಕೇತವಾಗಿ ಪೆನ್ಸಿಲ್ ಅನ್ನು ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

ಕುವೆಟ್ಟು ಗ್ರಾ ಪಂ ಸದಸ್ಯರಾದ ಶ್ರೀಮತಿ ಆನಂದಿ ಎಸ್‌ ಡಿ ಎಂ ಸಿ ಸರ್ವ ಸದಸ್ಯರು, ಪೋಷಕರು, ಹಳೇವಿದ್ಯಾರ್ಥಿಗಳ ಸಂಪೂರ್ಣ ಸಹಕಾರದೊಂದಿಗೆ, ವಿದ್ಯಾರ್ಥಿಗಳಿಗೆ ಆರತಿ ಬೆಳಗಿ,ಬ್ಯಾಂಡ್ ವಾದ್ಯಗಳ ಘೋಷಗಳೊಂದಿಗೆ ಶಾಲಾ ಆವರಣದೊಳಗೆ ಕರೆತರಲಾಯಿತು.

ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ಪ್ರಮೀಳಾ ಶೆಟ್ಟಿ ದೀಪವನ್ನು ಪ್ರಜ್ವಲಿಸಿ ಶುಭ ಹಾರೈಸಿದರು. ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಅಧ್ಯಕ್ಷರ ಸಮ್ಮುಖದಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಲಾಯಿತು ಶ್ರೀಮತಿ ಸುಜಾತ ಕಾರ್ಯಕ್ರಮ ನಿರೂಪಿಸಿದರು ಶ್ರೀಮತಿ ಅಕ್ಷತಾ ಧನ್ಯವಾದಗಳು ಕೋರಿದರು.

ಶಿಕ್ಷಕ ವೃಂದ ಹಾಗೂ ಅಡುಗೆ ಸಿಬ್ಬಂದಿಗಳ ಸಹಕಾರದೊಂದಿಗೆ ಕಾರ್ಯಕ್ರಮ ಅತ್ಯುತ್ತಮವಾಗಿ ಸಂಪನ್ನಗೊಂಡಿತು.

Related posts

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ಹಳೆಕೋಟೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಕಟ್ಟಡ, ಸಭಾವನದ ಉದ್ಘಾಟನೆಗೆ: ಆದಿಚುಂಚನಗಿರಿ ಸ್ವಾಮೀಜಿಗಳನ್ನು ಆಹ್ವಾನಿಸಿ ಅವರ ದಿವ್ಯಹಸ್ತದಿಂದಲೇ ಕಟ್ಟಡವನ್ನು ಉದ್ಘಾಟಿಸುವಂತೆ – ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮುಖಂಡರ ಆಗ್ರಹ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಉಜಿರೆ ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಶುಭಾರಂಭ – ಭಗವಂತನ ಅನುಗ್ರಹದಿಂದ ಸಂಸ್ಥೆಯು ಪ್ರಗತಿ ಪಥದಲ್ಲಿ ಸಾಗಲಿ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ

Suddi Udaya
error: Content is protected !!