30.7 C
ಪುತ್ತೂರು, ಬೆಳ್ತಂಗಡಿ
June 5, 2025
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

ನಾಳ: ನಾಳ ನ್ಯಾಯತರ್ಪು ಗ್ರಾಮದ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ ಜೂ.3ರಂದು ಜರುಗಿತು.

ಸುಮಾರು ಅಂದಾಜು ೯೦೦ ವರ್ಷಗಳಿಗೂ ಹೆಚ್ಚಿನ ಇತಿಹಾಸ ಪ್ರಸಿದ್ಧ ದೇವಸ್ಥಾನವು ನ್ಯಾಯತರ್ಪು, ಕಳಿಯ ಹಾಗೂ ಓಡಿಲ್ನಾಳ ಗ್ರಾಮದ ಭಕ್ತಾದಿಗಳು ಆರಾಧನೆ ಮೂಲಕ ವಿವಿಧ ಕಾರ್ಯಕ್ರಮಗಳು ನಡೆಯುತ್ತದೆ ಬರುತ್ತಿದೆ.

ಭತ್ತದ ಬೇಸಾಯ ಮರೆಮಾಚುತ್ತಿದ್ದು ಭಾದ್ರಪದ ಮಾಸದಲ್ಲಿ ದೇವಸ್ಥಾನಗಳಿಗೆ, ದೈವಸ್ಥಾನ ಹಾಗೂ ಹಿಂದುಗಳು ತನೆ ಕಟ್ಟುವುದು ಮತ್ತು ಹೊಸ ಆಕ್ಕಿ ಊಟ ಆಚರಣೆ ನಡೆಯುತ್ತದೆ. ಈ ಸಂದರ್ಭದಲ್ಲಿ ತೆನೆ ಅಗತ್ಯವಾಗಿದೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ಭತ್ತದ ಬೇಸಾಯ ಕೃಷಿ ಬೆಳೆಸುವುದು ಅನಿವಾರ್ಯ ವಾಗಿದೆ ಎಂದು ಹಿರಿಯರು ಬೇಸರ ವ್ಯಕ್ತ ಪಡಿಸುತ್ತಿದ್ದಾರೆ.

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ., ಸದಸ್ಯರಾದ ರಾಘವ ಹೆಚ್. ಹರೀಶ್ ಗೌಡ, ರೀತಾ ಚಂದ್ರಶೇಖರ್, ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು, ಮಾಜಿ ಸದಸ್ಯ ರಾಜೇಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಎಂ., ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಭಜನಾ ಮಂಡಳಿ ಅಧ್ಯಕ್ಷ ಗಣೇಶ್ ಬಿ., ಶ್ರೀದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ಮಮತಾ ಆಳ್ವ, ಪ್ರಬಂಧಕ ಗಿರೀಶ್ ಶೆಟ್ಟಿ, ಅಡ್ಡಕೊಡಂಗೆ, ಹಿರಿಯರಾದ ಪೂವಪ್ಪ ಶೆಟ್ಟಿ, ಉಮಾನಾಥ ಶೆಟ್ಡಿ ಕುಲ್ಲುಂಜ, ಉಮೇಶ್ ಶೆಟ್ಟಿ ಸಂಬೋಳ್ಯ, ಭಕ್ತಾದಿಗಳು ಮತ್ತಿತರರಿದ್ದರು.

ಕೃಷಿಕ ಕುಲ್ಲುಂಜ ನಿವಾಸಿ ಉಮನಾಥ ಶೆಟ್ಟಿ ಸ್ವತಃ ಭತ್ತದ ಬೀಜ ಬಿತ್ತನೆ ಮಾಡಿ ನೇಜಿ ತಯಾರಿಸಿ ಪ್ರತಿ ವರ್ಷದಂತೆ ದೇವಸ್ಥಾನಕ್ಕೆ ಉಚಿತವಾಗಿ ನೀಡಿದರು.

Related posts

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣಕ್ಕೆ ತಿರುವು: ಪ್ರೇಮ ಪ್ರಕರಣ ವೈಫಲ್ಯ ಶಂಕೆ: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಪ್ರಕರಣ ದಾಖಲು

Suddi Udaya

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya

ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆ.14: ಕಳೆಂಜ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ

Suddi Udaya
error: Content is protected !!