July 23, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

ನಾಳ: ನಾಳ ನ್ಯಾಯತರ್ಪು ಗ್ರಾಮದ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ ಜೂ.3ರಂದು ಜರುಗಿತು.

ಸುಮಾರು ಅಂದಾಜು ೯೦೦ ವರ್ಷಗಳಿಗೂ ಹೆಚ್ಚಿನ ಇತಿಹಾಸ ಪ್ರಸಿದ್ಧ ದೇವಸ್ಥಾನವು ನ್ಯಾಯತರ್ಪು, ಕಳಿಯ ಹಾಗೂ ಓಡಿಲ್ನಾಳ ಗ್ರಾಮದ ಭಕ್ತಾದಿಗಳು ಆರಾಧನೆ ಮೂಲಕ ವಿವಿಧ ಕಾರ್ಯಕ್ರಮಗಳು ನಡೆಯುತ್ತದೆ ಬರುತ್ತಿದೆ.

ಭತ್ತದ ಬೇಸಾಯ ಮರೆಮಾಚುತ್ತಿದ್ದು ಭಾದ್ರಪದ ಮಾಸದಲ್ಲಿ ದೇವಸ್ಥಾನಗಳಿಗೆ, ದೈವಸ್ಥಾನ ಹಾಗೂ ಹಿಂದುಗಳು ತನೆ ಕಟ್ಟುವುದು ಮತ್ತು ಹೊಸ ಆಕ್ಕಿ ಊಟ ಆಚರಣೆ ನಡೆಯುತ್ತದೆ. ಈ ಸಂದರ್ಭದಲ್ಲಿ ತೆನೆ ಅಗತ್ಯವಾಗಿದೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ಭತ್ತದ ಬೇಸಾಯ ಕೃಷಿ ಬೆಳೆಸುವುದು ಅನಿವಾರ್ಯ ವಾಗಿದೆ ಎಂದು ಹಿರಿಯರು ಬೇಸರ ವ್ಯಕ್ತ ಪಡಿಸುತ್ತಿದ್ದಾರೆ.

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ., ಸದಸ್ಯರಾದ ರಾಘವ ಹೆಚ್. ಹರೀಶ್ ಗೌಡ, ರೀತಾ ಚಂದ್ರಶೇಖರ್, ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು, ಮಾಜಿ ಸದಸ್ಯ ರಾಜೇಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಎಂ., ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಭಜನಾ ಮಂಡಳಿ ಅಧ್ಯಕ್ಷ ಗಣೇಶ್ ಬಿ., ಶ್ರೀದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ಮಮತಾ ಆಳ್ವ, ಪ್ರಬಂಧಕ ಗಿರೀಶ್ ಶೆಟ್ಟಿ, ಅಡ್ಡಕೊಡಂಗೆ, ಹಿರಿಯರಾದ ಪೂವಪ್ಪ ಶೆಟ್ಟಿ, ಉಮಾನಾಥ ಶೆಟ್ಡಿ ಕುಲ್ಲುಂಜ, ಉಮೇಶ್ ಶೆಟ್ಟಿ ಸಂಬೋಳ್ಯ, ಭಕ್ತಾದಿಗಳು ಮತ್ತಿತರರಿದ್ದರು.

ಕೃಷಿಕ ಕುಲ್ಲುಂಜ ನಿವಾಸಿ ಉಮನಾಥ ಶೆಟ್ಟಿ ಸ್ವತಃ ಭತ್ತದ ಬೀಜ ಬಿತ್ತನೆ ಮಾಡಿ ನೇಜಿ ತಯಾರಿಸಿ ಪ್ರತಿ ವರ್ಷದಂತೆ ದೇವಸ್ಥಾನಕ್ಕೆ ಉಚಿತವಾಗಿ ನೀಡಿದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ – ಶಾಲಾ ಅಭಿವೃದ್ಧಿ ಸಮಿತಿ ರಚನೆ

Suddi Udaya

ಪುಂಜಾಲಕಟ್ಟೆ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya

ಮುಂಡೂರು ನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಕುಣಿತ ಭಜನೋತ್ಸವ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ 27ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುವೆಟ್ಟು ಮತ್ತು ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರಿಂದ ಏಕನಾಥ ಶೆಟ್ಟಿ ಪ್ರತಿಮೆಗೆ ಮಾಲಾರ್ಪಣೆ

Suddi Udaya
error: Content is protected !!