22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೆಲ್ಯಾಡಿ ಅಮ್ಮ ಕ್ಯಾಂಟೀನ್ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ: ನೆಲ್ಯಾಡಿಯ ಹೃದಯಭಾಗದಲ್ಲಿ ಕಾರ್ಯಾಚರಿಸುತ್ತಿದ್ದ ‘ಅಮ್ಮ ಕ್ಯಾಂಟೀನ್’ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ (38ವ) ಜೂ.2ರಂದು ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲತಃ ಪಾರೆಂಕಿ ಗ್ರಾಮದ ಮಡಂತ್ಯಾರ್ ಬಳಿಯ ದಡ್ಡು ನಿವಾಸಿಯಾಗಿರುವ ಗಿರೀಶ್, ಕಳೆದ 7 ವರ್ಷಗಳಿಂದ ನೆಲ್ಯಾಡಿಯಲ್ಲಿ ‘ಅಮ್ಮ ಕ್ಯಾಂಟೀನ್’ ನಡೆಸುತ್ತಿದ್ದರು. ಸರಳತೆ, ಶುದ್ಧ ಆಹಾರ, ಹಾಗೂ ನಿಜವಾದ ಸೇವಾಭಾವನೆಗಾಗಿ ಪ್ರಸಿದ್ಧಿ ಪಡೆದಿದ್ದ ಈ ಕ್ಯಾಂಟೀನ್ ಸ್ಥಳೀಯರ ವಿಶ್ವಾಸ ಗಳಿಸಿತ್ತು. ಗಿರೀಶ್ ಅವರು ಪತ್ನಿ ಮತ್ತು ಒಂದು ಮಗು ಜೊತೆಗೆ ನೆಲ್ಯಾಡಿ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಶನಿವಾರ ದಂದು ಅವರು ತಮ್ಮ ಮೂಲ ಮನೆಗೆ ಹೋಗಿದ್ದು, ಅಲ್ಲಿ ಸೋಮವಾರ ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರಿಗೆ ಪತ್ನಿ, ಪುತ್ರ, ತಾಯಿ ಹಾಗೂ ಸಹೋದರ-ಸಹೋದರಿಯರು ಇದ್ದಾರೆ.

Related posts

ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್‌ ಪ್ರಶ್ನೆ

Suddi Udaya

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ಕಕ್ಕಿಂಜೆ: ರಮ್ಯ ಡ್ರೆಸ್ಸಸ್ ನಲ್ಲಿ ಶೇ. 10-30 ಡಿಸ್ಕೌಂಟ್ ಸೇಲ್

Suddi Udaya

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya

ಅಕ್ಷಯ ಕಾಲೇಜಿನ ಬಿಕಾಂ ವಿಥ್ ಏವಿಯೇಷನ್ ಆ್ಯಂಡ್ ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ

Suddi Udaya

ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!