ಬಜಿರೆ: ಇಲ್ಲಿಯ ಪಿಎಂಶ್ರೀ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಜಿರೆಯಲ್ಲಿ ಶಾಲಾ ಪ್ರಾರಂಭೋತ್ಸವವು ಕಾರ್ಯಕ್ರಮವು ಜೂ.2ರಂದು ವಿಜೃಂಭಣೆಯಿಂದ ನಡೆಯಿತು.

ಮಕ್ಕಳನ್ನು ಬ್ಯಾಂಡ್ ಸೆಟ್ ಮೂಲಕ ಮೆರವಣಿಗೆಯಲ್ಲಿ ಬರಮಾಡಿಕೊಂಡು ವಿದ್ಯಾರ್ಥಿಗಳಿಗೆ ಹೂವನ್ನು ನೀಡಿ ಸ್ವಾಗತಿಸಿ, ಸಿಹಿ ನೀಡಿ ಬರಮಾಡಿಕೊಂಡರು.

ಈ ಸಂದರ್ಭ ಕಾರ್ಯಕ್ರಮದಲ್ಲಿ ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್, ಶಾಲಾ ಎಸ್ಡಿಎಂಸಿ ಅಧ್ಯಕ್ಷ ದಿನೇಶ್, ಉಪಾಧ್ಯಕ್ಷೆ ಸುಶೀಲ, ಶಾಲಾ ಮುಖ್ಯೋಪಾಧ್ಯಾಯಿನಿ ಕಮಲಾಜಿ ಎಸ್. ಜೈನ್, ಎಸ್ಡಿಎಂಸಿ ಸದಸ್ಯ ಕಾಶಿನಾಥ್ ಹೆಗ್ಡೆ, ಎಸ್ಡಿಎಂಸಿ ಮಾಜಿ ಅಧ್ಯಕ್ಷ ಶಿವಾನಂದ ಗೌಡ ಹಾಗೂ ತಾಯಂದಿರ ಸಮಿತಿ ಅಧ್ಯಕ್ಷೆ ಜಯಶ್ರೀ, ಎಸ್ಡಿಎಂಸಿ ಸದಸ್ಯರು, ತಾಯಂದಿರ ಸಮಿತಿಯ ಸದಸ್ಯರು, ಶಾಲಾ ಶಿಕ್ಷಕವೃಂದದವರು, ಬಿಸಿಯೂಟ ಸಿಬ್ಬಂದಿಗಳು, ಪೋಷಕರು ಉಪಸ್ಥಿತರಿದ್ದು ಸಹಕರಿಸಿದರು.

ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಹಾಗೂ ಬ್ಯಾಗ್ ವಿತರಿಸಲಾಯಿತು. ಮಧ್ಯಾಹ್ನ ಸಿಹಿ ಊಟದೊಂದಿಗೆ ಮೊಟ್ಟೆಯನ್ನು ಮತ್ತು ಬಾಳೆಹಣ್ಣನ್ನು ವಿತರಿಸಲಾಯಿತು.