22.5 C
ಪುತ್ತೂರು, ಬೆಳ್ತಂಗಡಿ
June 5, 2025
Uncategorized

ಬೆಳ್ತಂಗಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯಿಂದ ನೆರವು

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ರೂ. ೨.೫೦ ಲಕ್ಷ ಅನುದಾನವನ್ನು ಮಂಜೂರುಗೊಳಿಸಿದ್ದಾರೆ.

ಇದರಲ್ಲಿ ರು.೧,೫೧,೬೩೦ ಮೊತ್ತ ಸಿಲಿಕಾನ್ ಛೇಂಬರ್‌ಗೆ ಹಾಗೂ ರೂ.೯೮,೩೭೦ ರುದ್ರಭೂಮಿ ನಿರ್ಮಾಣಕ್ಕೆ ಧನ ಸಹಾಯವಾಗಿದ್ದು, ಧರ್ಮಸ್ಥಳದಿಂದ ಮಂಜೂರಾದ ಅನುದಾನದ ಚೆಕ್ಕನ್ನು ಜೂ.೨ರಂದು ನಡೆದ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಅವರ ಮೂಲಕ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡರಿಗೆ ಯೋಜನಾಧಿಕಾರಿ ಯೋಧರ ಅವರು ಹಸ್ತಾಂತರಿಸಲಾಯಿತು.

ಈ ಸಂದರ್ಭ ಲಾಯಿಲ ವಲಯ ಮೇಲ್ವಿಚಾರಕ ಸುಶಾಂತ್, ಕೇಂದ್ರ ಒಕ್ಕೂಟ ಅಧ್ಯಕ್ಷ ಸೀತಾರಾಮ್ ಆರ್., ಒಕ್ಕೂಟ ಪದಾಧಿಕಾರಿಗಳಾದ ದಯಾನಂದ್ ಕೋಟ್ಯಾನ್, ಯಶೋಧಾ, ಪ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಮುಖ್ಯಾಧಿಕಾರಿ ರಾಜೇಶ್ ಉಪಸ್ಥಿತರಿದ್ದರು.

Related posts

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ

Suddi Udaya

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya
error: Content is protected !!