23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳ್ತಂಗಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯಿಂದ ನೆರವು

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ರೂ. ೨.೫೦ ಲಕ್ಷ ಅನುದಾನವನ್ನು ಮಂಜೂರುಗೊಳಿಸಿದ್ದಾರೆ.

ಇದರಲ್ಲಿ ರು.೧,೫೧,೬೩೦ ಮೊತ್ತ ಸಿಲಿಕಾನ್ ಛೇಂಬರ್‌ಗೆ ಹಾಗೂ ರೂ.೯೮,೩೭೦ ರುದ್ರಭೂಮಿ ನಿರ್ಮಾಣಕ್ಕೆ ಧನ ಸಹಾಯವಾಗಿದ್ದು, ಧರ್ಮಸ್ಥಳದಿಂದ ಮಂಜೂರಾದ ಅನುದಾನದ ಚೆಕ್ಕನ್ನು ಜೂ.೨ರಂದು ನಡೆದ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಅವರ ಮೂಲಕ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡರಿಗೆ ಯೋಜನಾಧಿಕಾರಿ ಯೋಧರ ಅವರು ಹಸ್ತಾಂತರಿಸಲಾಯಿತು.

ಈ ಸಂದರ್ಭ ಲಾಯಿಲ ವಲಯ ಮೇಲ್ವಿಚಾರಕ ಸುಶಾಂತ್, ಕೇಂದ್ರ ಒಕ್ಕೂಟ ಅಧ್ಯಕ್ಷ ಸೀತಾರಾಮ್ ಆರ್., ಒಕ್ಕೂಟ ಪದಾಧಿಕಾರಿಗಳಾದ ದಯಾನಂದ್ ಕೋಟ್ಯಾನ್, ಯಶೋಧಾ, ಪ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಮುಖ್ಯಾಧಿಕಾರಿ ರಾಜೇಶ್ ಉಪಸ್ಥಿತರಿದ್ದರು.

Related posts

ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ , ಉಪಾಧ್ಯಕ್ಷರಾಗಿ ಸೋಮಪ್ಪ ಗೌಡ

Suddi Udaya

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ಎಸ್ಐಆರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಪ್ರಜಾತಂತ್ರದ ಕಗ್ಗೊಲೆ ಮಾಡಲು ಯತ್ನಿಸುತ್ತಿದೆ. ರಕ್ಷಿತ್ ಶಿವರಾಂ

Suddi Udaya

ಲಾಯಿಲ:ಉಮ್ಮಣ್ಣ ಗೌಡ ನಿಧನ

Suddi Udaya

ಬೆಳಾಲು : ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಉಡುಪಿ ಪೇಜಾವರ ಮಠದ ಸ್ವಾಮೀಜಿ ಭೇಟಿ, ಆಶೀರ್ವಚನ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya
error: Content is protected !!