25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯಿಂದ ನೆರವು

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ರೂ. ೨.೫೦ ಲಕ್ಷ ಅನುದಾನವನ್ನು ಮಂಜೂರುಗೊಳಿಸಿದ್ದಾರೆ.

ಇದರಲ್ಲಿ ರು.೧,೫೧,೬೩೦ ಮೊತ್ತ ಸಿಲಿಕಾನ್ ಛೇಂಬರ್‌ಗೆ ಹಾಗೂ ರೂ.೯೮,೩೭೦ ರುದ್ರಭೂಮಿ ನಿರ್ಮಾಣಕ್ಕೆ ಧನ ಸಹಾಯವಾಗಿದ್ದು, ಧರ್ಮಸ್ಥಳದಿಂದ ಮಂಜೂರಾದ ಅನುದಾನದ ಚೆಕ್ಕನ್ನು ಜೂ.೨ರಂದು ನಡೆದ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಅವರ ಮೂಲಕ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡರಿಗೆ ಯೋಜನಾಧಿಕಾರಿ ಯೋಧರ ಅವರು ಹಸ್ತಾಂತರಿಸಲಾಯಿತು.

ಈ ಸಂದರ್ಭ ಲಾಯಿಲ ವಲಯ ಮೇಲ್ವಿಚಾರಕ ಸುಶಾಂತ್, ಕೇಂದ್ರ ಒಕ್ಕೂಟ ಅಧ್ಯಕ್ಷ ಸೀತಾರಾಮ್ ಆರ್., ಒಕ್ಕೂಟ ಪದಾಧಿಕಾರಿಗಳಾದ ದಯಾನಂದ್ ಕೋಟ್ಯಾನ್, ಯಶೋಧಾ, ಪ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಮುಖ್ಯಾಧಿಕಾರಿ ರಾಜೇಶ್ ಉಪಸ್ಥಿತರಿದ್ದರು.

Related posts

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಖಂಡನೆ: ಜಿಲ್ಲಾ ಬಂದ್‌ಗೆ ಹಿಂದೂ ಸಂಘಟನೆಗಳ ಕರೆ : ಬೆಳ್ತಂಗಡಿ ತಾಲೂಕಿನ ಪೇಟೆಗಳಲ್ಲಿ ಭಾಗಶಃ ಅಂಗಡಿ-ಮುಂಗಟ್ಟುಗಳು ಬಂದ್

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ನಾಳೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಯಕ್ಷಭಾರತಿ ದಶಮಾನೋತ್ಸವ ಸಭಾ ಸಮಾರಂಭ ಮತ್ತು ಭಾರತ ಮಾತಾ ಪೂಜನ : ದಶಮಾನೋತ್ಸವ ಗೌರವ-ಯಕ್ಷಭಾರತಿ ಪ್ರಶಸ್ತಿ-ಸೇವಾ ಗೌರವ-ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮೈಸೂರು ಚಾಮರಾಜನಗರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ನೇತೃತ್ವದಲ್ಲಿ ಎರಡು ಸಾವಿರ ಮಂದಿಯಿಂದ ಧರ್ಮಸ್ಥಳ ಚಲೋ

Suddi Udaya
error: Content is protected !!