30.7 C
ಪುತ್ತೂರು, ಬೆಳ್ತಂಗಡಿ
June 5, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮನ್‌ಶರ್ ಪಿ.ಯು. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅಧಿಕಾರ ಸ್ವೀಕಾರ

ಮಡಂತ್ಯಾರು: ಗೇರುಕಟ್ಟೆಯಲ್ಲಿ ಬಹುಮಾನ್ಯ ಸಯ್ಯಿದ್ ಉಮರ್ ಅಸ್ಸಖಾಫ್ ಮನ್‌ಷ್ಯರ್ ತಂಗಳ್ ರವರ ನೇತೃತ್ವದ ಮನ್‌ಶರ್ ಪಿ.ಯು ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅವರು ಅಧಿಕಾರ ಸ್ವೀಕರಿಸಿದರು.

ಇವರು ಬಂಟ್ವಾಳ ತಾಲೂಕು ಕಾವಲುಕಟ್ಟೆ ಎನ್.ಸಿ. ರೋಡ್ ನಿವಾಸಿ, ಸರಕಾರಿ ಪದವಿಪೂರ್ವ ಕಾಲೇಜು ಸಿದ್ದಕಟ್ಟೆಯ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿರುತ್ತಾರೆ. ಡಿ. ರಾಮಯ್ಯ ರವರ ಸುಪುತ್ರಿ. ಗಣಿತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದು ಸುಮಾರು 17 ವರ್ಷಕ್ಕಿಂತಲೂ ಹೆಚ್ಚು ಕಾಲ ಸೇವೆಯನ್ನು ಸಲ್ಲಿಸಿದ್ದಾರೆ.

ಮೇ 31ರಂದು ಗೇರುಕಟ್ಟೆ ಮನ್‌ಶರ್ ಸಂಸ್ಥೆಯ ಅಧ್ಯಕ್ಷರು ಸಯ್ಯಿದ್ ಉಮರ್ ಅಸ್ಸಖಾಫ್ ಮನ್‌ಷ್ಯರ್ ತಂಗಳ್, ಸಂಸ್ಥೆಯ ಜನರಲ್ ಮ್ಯಾನೇಜರ್ ಹೈದರ್ ಮರ್ದಾಳ, ಪಿ.ಯು. ಕಾಲೇಜು ಉಪ ಪ್ರಾಂಶುಪಾಲರು ಮೊಹಮ್ಮದ್ ತೌಫೀಕ್ ಪಟ್ಟೆ ಹಾಗೂ ಉಪನ್ಯಾಸಕರ ಉಪಸ್ಥಿತಿಯಲ್ಲಿ ಅಧಿಕಾರ ಪತ್ರವನ್ನು ನೀಡಿ ಗೌರವಿಸಲಾಯಿತು.

Related posts

ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾ ಕಾರ್ಯದರ್ಶಿಯಾಗಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಆಯ್ಕೆ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

Suddi Udaya

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya
error: Content is protected !!