23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮನ್‌ಶರ್ ಪಿ.ಯು. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅಧಿಕಾರ ಸ್ವೀಕಾರ

ಮಡಂತ್ಯಾರು: ಗೇರುಕಟ್ಟೆಯಲ್ಲಿ ಬಹುಮಾನ್ಯ ಸಯ್ಯಿದ್ ಉಮರ್ ಅಸ್ಸಖಾಫ್ ಮನ್‌ಷ್ಯರ್ ತಂಗಳ್ ರವರ ನೇತೃತ್ವದ ಮನ್‌ಶರ್ ಪಿ.ಯು ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅವರು ಅಧಿಕಾರ ಸ್ವೀಕರಿಸಿದರು.

ಇವರು ಬಂಟ್ವಾಳ ತಾಲೂಕು ಕಾವಲುಕಟ್ಟೆ ಎನ್.ಸಿ. ರೋಡ್ ನಿವಾಸಿ, ಸರಕಾರಿ ಪದವಿಪೂರ್ವ ಕಾಲೇಜು ಸಿದ್ದಕಟ್ಟೆಯ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿರುತ್ತಾರೆ. ಡಿ. ರಾಮಯ್ಯ ರವರ ಸುಪುತ್ರಿ. ಗಣಿತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದು ಸುಮಾರು 17 ವರ್ಷಕ್ಕಿಂತಲೂ ಹೆಚ್ಚು ಕಾಲ ಸೇವೆಯನ್ನು ಸಲ್ಲಿಸಿದ್ದಾರೆ.

ಮೇ 31ರಂದು ಗೇರುಕಟ್ಟೆ ಮನ್‌ಶರ್ ಸಂಸ್ಥೆಯ ಅಧ್ಯಕ್ಷರು ಸಯ್ಯಿದ್ ಉಮರ್ ಅಸ್ಸಖಾಫ್ ಮನ್‌ಷ್ಯರ್ ತಂಗಳ್, ಸಂಸ್ಥೆಯ ಜನರಲ್ ಮ್ಯಾನೇಜರ್ ಹೈದರ್ ಮರ್ದಾಳ, ಪಿ.ಯು. ಕಾಲೇಜು ಉಪ ಪ್ರಾಂಶುಪಾಲರು ಮೊಹಮ್ಮದ್ ತೌಫೀಕ್ ಪಟ್ಟೆ ಹಾಗೂ ಉಪನ್ಯಾಸಕರ ಉಪಸ್ಥಿತಿಯಲ್ಲಿ ಅಧಿಕಾರ ಪತ್ರವನ್ನು ನೀಡಿ ಗೌರವಿಸಲಾಯಿತು.

Related posts

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

Suddi Udaya

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya

ಭಗವದ್ಗೀತಾ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!