September 6, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ವರದಿ

ಶಿಬಾಜೆ: ರಸ್ತೆಗೆ ಅಡ್ಡಲಾಗಿ ಇಟ್ಟಿಗೆ ಇಟ್ಟ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಾಯ ಆರೋಪಿ ವಿರುದ್ಧ ಪ್ರಕರಣ ದಾಖಲು

ಶಿಬಾಜೆ: ರಸ್ತೆಗೆ ಅಡ್ಡಲಾಗಿ ಸಣ್ಣ ಇಟ್ಟಿಗೆಯನ್ನು ಇಟ್ಟು ಅದಕ್ಕೆ ಗೋಣಿಚೀಲ ಹಾಕಿ ಯಾವುದೇ ಸೂಚನಾ ಫಲಕ ಇಡದೆ ರಸ್ತೆಯನ್ನು ಮುಚ್ಚಿದ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಶಿಬಾಜೆಯ ಅಭಿಲಾಷ್ ಗಾಯಗೊಂಡ ಪ್ರಕರಣ ಸಂಬಂಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಚಾಲಕ ನೀಡಿದ ದೂರಿನ ಮೇರೆಗೆ ಜೂ. 2 ರಂದು ಆರೋಪಿ ಶಿಬಾಜೆಯ ಕುರುಂಬು ನಿವಾಸಿ ಧರ್ಣಪ್ಪ ಗೌಡ ವಿರುದ್ಧ (BNS) 2023(u/s -285,125(a)) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ: ಜೂನ್ 1 ರಂದು ಚಾಲಕ ಶಿಬಾಜೆಯ ಅಭಿಲಾಷ್ ತನ್ನ ಆಟೋ ರಿಕ್ಷಾ (KA-70-8816) ದಲ್ಲಿ ಶಿಬಾಜೆ ಕಡೆಯಿಂದ ಅರಸಿನಮಕ್ಕಿ ಕಡೆಗೆ ಸುಮಾರು ರಾತ್ರಿ 8:49 ಗಂಟೆಗೆ ಚಲಾಯಿಸಿಕೊಂಡು ಹೋಗುತ್ತಿರುವ ಸಮಯದಲ್ಲಿ ಬೆಳ್ತಂಗಡಿ ತಾಲೂಕು ಶಿಬಾಜೆ ಗ್ರಾಮದ ಕುರುಂಬು ಎಂಬಲ್ಲಿಗೆ ತಲುಪುತ್ತಿದಂತೆ ಅಭಿಲಾಷ್ ಚಲಾಯಿಸುತ್ತಿದ್ದ ರಸ್ತೆಯಲ್ಲಿ ಶಿಬಾಜೆ ಗ್ರಾಮದ ಕುರುಂಬು ನಿವಾಸಿ ಧರ್ಣಪ್ಪ ಗೌಡ ಎಂಬುವರು ರಸ್ತೆಯ ಮಧ್ಯಭಾಗದಲ್ಲಿ ಸಣ್ಣ ಇಟ್ಟಿಗೆಯನ್ನು ಇಟ್ಟು ಅದರ ಮೇಲೆ ಗೋಣಿಚೀಲವನ್ನು ಹಾಕಿ ಯಾವುದೇ ಸೂಚನಾ ಫಲಕ ಇಡದೇ ರಸ್ತೆಯನ್ನು ಮುಚ್ಚಿದ ಪರಿಣಾಮ ಅಭಿಲಾಷ್ ತನ್ನ ಬಾಬು ಆಟೋರಿಕ್ಷಾದ ಚಾಲನಾ ನಿಯಂತ್ರಣ ತಪ್ಪಿ ಒಮ್ಮೆಲೆ ಆಟೋರಿಕ್ಷಾ ಸಮೇತ ರಸ್ತೆಗೆ ಬಲಮಗ್ಗುಲಾಗಿ ಬಿದ್ದ ಕೂಡಲೇ ಅಭಿಲಾಷ್ ಅವರ ತಮ್ಮನಿಗೆ ದೂರವಾಣಿ ಕರೆ ಮೂಲಕ ಅಪಘಾತವಾದ ಬಗ್ಗೆ ತಿಳಿಸಿದ ತಕ್ಷಣ ಅವರ ತಮ್ಮ ಅನೀಷ್ ಎಂಬುವರು ಅಪಘಾತ ಸ್ಥಳಕ್ಕೆ ಬಂದು ಗಾಯಗೊಂಡ ಅಭಿಲಾಷ್ ನನ್ನು ಎತ್ತಿ ಉಪಚರಿಸಿ ಬಲಕಾಲಿನ ಮೊಣಕಾಲೆಗೆ ರಕ್ತಗಾಯ ಬಲಕಾಲಿನ ಮಣಿಗಂಟೆಗೆ ರಕ್ತಗಾಯ ಹಾಗೂ ಬಲ ಕಿಬ್ಯೂಟಿಗೆ ತರಚಿದ ಗಾಯವಾದವರನ್ನು ಚಿಕಿತ್ಸೆ ಬಗ್ಗೆ ಉಜಿರೆಯ SDM ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Related posts

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

Suddi Udaya

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 46 ಮತದಾನ

Suddi Udaya

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya

ಕುತ್ಲೂರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಬೃಹತ್ ಆಧಾರ್ ನೋಂದಣಿ/ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮೆ ಮೇಳ

Suddi Udaya

ಕಾಲ್ತುಳಿತ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ: ಹರೀಶ್ ಪೂಂಜ

Suddi Udaya
error: Content is protected !!