30.7 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದ ಉದ್ಘಾಟನಾ ಸಮಾರಂಭವು ಜೂನ್ 3ರಂದು ಸೇಕ್ರೆಡ್ ಹಾರ್ಟ್ ಸಮುದಾಯ ಭವನದಲ್ಲಿ ನಡೆಯಿತು.

ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭವಾದ ಸಮಾರಂಭದಲ್ಲಿ ಶಾಲಾ ಸಂಚಾಲಕರು ಹಾಗೂ ಇತರ ಗಣ್ಯರು ದೀಪ ಬೆಳಗಿಸುವುದರ ಮೂಲಕ 2025-26ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕರಾದ ವಂ|ಸ್ವಾ। ಸ್ಪ್ಯಾನಿ ಗೋವಿಯಸ್ ಇವರು ವಹಿಸಿದ್ದರು.

ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ನಾವು ಉತ್ಸಾಹದಿಂದ ನಮ್ಮ ಜೀವನವನ್ನು ಪ್ರಾರಂಭಿಸಿದಾಗ ನಾವು ಯಶಸ್ಸನ್ನು ಕಾಣುತ್ತೇವೆ ಎಂದು ಹೇಳಿ ಮಕ್ಕಳಿಗೆ ಶುಭ ಹಾರೈಸಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ| ಲಿಯೋ ನೊರೊನ್ಹ ಇವರು ಆಗಮಿಸಿದ್ದರು. ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ನಮ್ಮ ಜೀವನದಲ್ಲಿ ಒಂದು ಗುರಿ ಇರಬೇಕು ಆಗ ನಾವು ಯಶಸ್ಸನ್ನು ಕಾಣಬಹುದು ಎಂದು ಹೇಳಿ ಮಕ್ಕಳಿಗೆ ಶುಭ ಹಾರೈಸಿದರು.

2024-25ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕವನ್ನು ಗಳಿಸಿದ ಸ್ವರ್ಣ ಗೌರಿ ನಾಯಕ್‌, ಈಸ ಗಿಬ್ಬನ್ ತಾವೋ, ಪರ್ಲ್ ತಾವೋ, ಜೋಷ್ಮಾ ಜೋಯಿಸ್, ತೃಪ್ತಿ ಎಸ್‌.ಜೆ ಇವರನ್ನು ಅವರ ಹೆತ್ತವರೊಂದಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.ಶಾಲೆಗೆ ಹೊಸದಾಗಿ ನೇಮಕಗೊಂಡ ಶಿಕ್ಷಕ- ಶಿಕ್ಷಕಿಯರನ್ನು ಮತ್ತು ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಸಭೆಗೆ ಪರಿಚಯಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ|ದೀಪಕ್ ಲಿಯೊ ಡೇಸ ಇವರು ಎಲ್ಲ ವಿದ್ಯಾರ್ಥಿಗಳನ್ನು 2025-26ನೇ ಶೈಕ್ಷಣಿಕ ವರ್ಷಕ್ಕೆ ಸ್ವಾಗತಿಸಿ ಶುಭಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಮಡಂತ್ಯಾರು ಚರ್ಚ್ ಸಹಾಯಕ ಧರ್ಮ ಗುರುಗಳಾದ ವಂ|ಸ್ವಾ| ಲ್ಯಾರಿ ಪಿಂಟೋ ರವರು, ಮಡಂತ್ಯಾರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಜೆರಾಲ್ಡ್ ಮೊರಸ್ ರವರು,ಶಿಕ್ಷಕ- ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ವಿನಯ್ ಡಿಸೋಜ ರವರು,ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಶಿಕ್ಷಕರಾದ ಮಂಜುನಾಥ ರವರು ನಿರೂಪಿಸಿ, ಶ್ರೀಮತಿ ವಿನ್ನಿ ಲೋಬೋ ರವರು ಸ್ವಾಗತಿಸಿ, ಶ್ರೀಮತಿ ಐಡ ಡಿಕುನ್ಹಾ ರವರು ಧನ್ಯವಾದಗಳನ್ನು ಸಮರ್ಪಿಸಿದರು.

Related posts

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆ

Suddi Udaya

ಅಳದಂಗಡಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

Suddi Udaya

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya

ಜ. 20 ರಂದು ನಡೆಯಲಿರುವ ಗಮಕ ಸಮ್ಮೇಳನ ಶಾಸಕರಿಗೆ ಆಹ್ವಾನ

Suddi Udaya

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya
error: Content is protected !!