27 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಇಳಂತಿಲ: ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿತ : ಗ್ರಾ.ಪಂ. ಸದಸ್ಯ ತಿಮ್ಮಪ್ಪ ಗೌಡರ ನೇತೃತ್ವದಲ್ಲಿ ತೆರವು ಕಾರ್ಯ

ಇಳಂತಿಲ: ಜೂ.3ರಂದು ಇಳಂತಿಲ ಗ್ರಾಮದ ಹಾರಕೆರೆ ಎಂಬಲ್ಲಿ ವಿಪರೀತ ಮಳೆಗೆ ಮುಖ್ಯ ರಸ್ತೆಗೆ ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿದು ವಾಹನ ಸಂಚಾರ ಸ್ತಗಿತಗೊಂಡಿತ್ತು.

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ತಿಮ್ಮಪ್ಪ ಗೌಡರವರು ಸ್ಥಳಕ್ಕೆ ಭೇಟಿ ನೀಡಿ, ಹಿಟಾಚಿ ಮೂಲಕ ಸ್ಥಳದಲ್ಲಿದ್ದ ಮಣ್ಣು ತೆರವು ಕಾರ್ಯ ಹಾಗೂ ಆ ಸ್ಥಳದ ಡಾಮಾರು ರಸ್ತೆಯಲ್ಲಿ ಕೆಸರಿದ್ದ ಕಾರಣ ದ್ವಿಚಕ್ರ, ತ್ರಿಚಕ್ರ ವಾಹನಕ್ಕೆ ಅಡಚಣೆ ಉಂಟಾಗಿತ್ತು ಇದನ್ನು ಗಮನಿಸಿ ಟ್ಯಾಂಕರ್ ನಲ್ಲಿ ನೀರು ಹಾಯಿಸಿ ರಸ್ತೆಯನ್ನು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಸಹಕರಿದರು.

ಈ ಕಾರ್ಯಕ್ಕೆ ನಾಗರಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.ವಿಪರ್ಯಾಸ ಎಂದರೆ ಹಾನಿ ಸಂಭವಿಸಿದ ಸ್ಥಳಕ್ಕೆ ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷರು, ಅಥವಾ ಸದಸ್ಯರಾಗಲಿ ಭೇಟಿ ನೀಡದೆ ಇರುವುದು ನಾಗರಿಕರ ಕೆಂಗಣ್ಣಿಗೆ ಗುರಿಯಾಗಿದೆ.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

Suddi Udaya

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!