July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಇಳಂತಿಲ: ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿತ : ಗ್ರಾ.ಪಂ. ಸದಸ್ಯ ತಿಮ್ಮಪ್ಪ ಗೌಡರ ನೇತೃತ್ವದಲ್ಲಿ ತೆರವು ಕಾರ್ಯ

ಇಳಂತಿಲ: ಜೂ.3ರಂದು ಇಳಂತಿಲ ಗ್ರಾಮದ ಹಾರಕೆರೆ ಎಂಬಲ್ಲಿ ವಿಪರೀತ ಮಳೆಗೆ ಮುಖ್ಯ ರಸ್ತೆಗೆ ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿದು ವಾಹನ ಸಂಚಾರ ಸ್ತಗಿತಗೊಂಡಿತ್ತು.

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ತಿಮ್ಮಪ್ಪ ಗೌಡರವರು ಸ್ಥಳಕ್ಕೆ ಭೇಟಿ ನೀಡಿ, ಹಿಟಾಚಿ ಮೂಲಕ ಸ್ಥಳದಲ್ಲಿದ್ದ ಮಣ್ಣು ತೆರವು ಕಾರ್ಯ ಹಾಗೂ ಆ ಸ್ಥಳದ ಡಾಮಾರು ರಸ್ತೆಯಲ್ಲಿ ಕೆಸರಿದ್ದ ಕಾರಣ ದ್ವಿಚಕ್ರ, ತ್ರಿಚಕ್ರ ವಾಹನಕ್ಕೆ ಅಡಚಣೆ ಉಂಟಾಗಿತ್ತು ಇದನ್ನು ಗಮನಿಸಿ ಟ್ಯಾಂಕರ್ ನಲ್ಲಿ ನೀರು ಹಾಯಿಸಿ ರಸ್ತೆಯನ್ನು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಸಹಕರಿದರು.

ಈ ಕಾರ್ಯಕ್ಕೆ ನಾಗರಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.ವಿಪರ್ಯಾಸ ಎಂದರೆ ಹಾನಿ ಸಂಭವಿಸಿದ ಸ್ಥಳಕ್ಕೆ ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷರು, ಅಥವಾ ಸದಸ್ಯರಾಗಲಿ ಭೇಟಿ ನೀಡದೆ ಇರುವುದು ನಾಗರಿಕರ ಕೆಂಗಣ್ಣಿಗೆ ಗುರಿಯಾಗಿದೆ.

Related posts

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya

ಭಜನೆಯಿಂದ ಸಾಮಾಜಿಕ ಸಾಮರಸ್ಯ: ಪ್ರೊ. ಶುಭಾ ಮರವಂತೆ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಭೇಟಿ

Suddi Udaya

ಕೃಷಿಕರ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಬೇಕು : ಮೋಹನ್ ಗೌಡ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘ ರಚನೆ, ಪೋಷಕರ ಸಭೆ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮದಾನ

Suddi Udaya
error: Content is protected !!