32.6 C
ಪುತ್ತೂರು, ಬೆಳ್ತಂಗಡಿ
June 6, 2025
Uncategorized

ಓಡಿಲ್ನಾಳ ಶಾಲೆಯಲ್ಲಿ ಅದ್ದೂರಿಯ ಶಾಲಾ ಪ್ರಾರಂಭೋತ್ಸವ

ಓಡಿಲ್ನಾಳ: ಜೂ.2 ರಂದು ಸ. ಉ. ಪ್ರಾ. ಶಾಲೆ ಓಡಿಲ್ನಾಳದಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಬಹಳ ಸಂಭ್ರಮ ಸಡಗರದಿಂದ ನಡೆಸಲಾಯಿತು. ತಳಿರು ತೋರಣಗಳನ್ನು ಕಟ್ಟಿ ಅಲಂಕಾರಗೊಂಡ ನಮ್ಮಿ ಶಾಲೆ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ತಮ್ಮ ದಿವ್ಯ ಉಪಸ್ಥಿತಿಯಲ್ಲಿ, ಶಾಲೆಗೆ ದಾಖಲಾದ ವಿದ್ಯಾರ್ಥಿಗಳಿಗೆ ಗುಲಾಬಿ ಹೂಗಳನ್ನು ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.

ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ಪ್ರಮೀಳಾ ಶೆಟ್ಟಿ ಬಲೂನುಗಳನ್ನು ವಿದ್ಯಾರ್ಥಿಗಳಿಗೆ ನೀಡಿ ಮನರಂಜಿಸಿದರು , ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಉಷಾ.ಪಿ ಇವರು ಕಲಿಕಾ ಪ್ರೇರಣೆಯ ಸಂಕೇತವಾಗಿ ಪೆನ್ಸಿಲ್ ಅನ್ನು ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

ಕುವೆಟ್ಟು ಗ್ರಾ ಪಂ ಸದಸ್ಯರಾದ ಶ್ರೀಮತಿ ಆನಂದಿ ಎಸ್‌ ಡಿ ಎಂ ಸಿ ಸರ್ವ ಸದಸ್ಯರು, ಪೋಷಕರು, ಹಳೇವಿದ್ಯಾರ್ಥಿಗಳ ಸಂಪೂರ್ಣ ಸಹಕಾರದೊಂದಿಗೆ, ವಿದ್ಯಾರ್ಥಿಗಳಿಗೆ ಆರತಿ ಬೆಳಗಿ,ಬ್ಯಾಂಡ್ ವಾದ್ಯಗಳ ಘೋಷಗಳೊಂದಿಗೆ ಶಾಲಾ ಆವರಣದೊಳಗೆ ಕರೆತರಲಾಯಿತು.

ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ಪ್ರಮೀಳಾ ಶೆಟ್ಟಿ ದೀಪವನ್ನು ಪ್ರಜ್ವಲಿಸಿ ಶುಭ ಹಾರೈಸಿದರು. ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಅಧ್ಯಕ್ಷರ ಸಮ್ಮುಖದಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಲಾಯಿತು ಶ್ರೀಮತಿ ಸುಜಾತ ಕಾರ್ಯಕ್ರಮ ನಿರೂಪಿಸಿದರು ಶ್ರೀಮತಿ ಅಕ್ಷತಾ ಧನ್ಯವಾದಗಳು ಕೋರಿದರು.

ಶಿಕ್ಷಕ ವೃಂದ ಹಾಗೂ ಅಡುಗೆ ಸಿಬ್ಬಂದಿಗಳ ಸಹಕಾರದೊಂದಿಗೆ ಕಾರ್ಯಕ್ರಮ ಅತ್ಯುತ್ತಮವಾಗಿ ಸಂಪನ್ನಗೊಂಡಿತು.

Related posts

ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಎಸ್. ಡಿ. ಯಂ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರ್‍ಯಾಂಕ್ ಹಾಗೂ ಶೇ. 100 ಫಲಿತಾಂಶ

Suddi Udaya

ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಗೇರುಕಟ್ಟೆ ನೂತನ ಹಿಂದೂ ರುದ್ರ ಭೂಮಿ ಲೋಕಾರ್ಪಣೆ ಪೂರ್ವಭಾವಿ ಸಭೆ

Suddi Udaya

ಮಿತ್ತಬಾಗಿಲು ಚೌಕಿಬೆಟ್ಟು ನಿವಾಸಿ ತನಿಯಪ್ಪ ಪೂಜಾರಿ ನಿಧನ

Suddi Udaya
error: Content is protected !!