23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

ನಾಳ: ನಾಳ ನ್ಯಾಯತರ್ಪು ಗ್ರಾಮದ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ ಜೂ.3ರಂದು ಜರುಗಿತು.

ಸುಮಾರು ಅಂದಾಜು ೯೦೦ ವರ್ಷಗಳಿಗೂ ಹೆಚ್ಚಿನ ಇತಿಹಾಸ ಪ್ರಸಿದ್ಧ ದೇವಸ್ಥಾನವು ನ್ಯಾಯತರ್ಪು, ಕಳಿಯ ಹಾಗೂ ಓಡಿಲ್ನಾಳ ಗ್ರಾಮದ ಭಕ್ತಾದಿಗಳು ಆರಾಧನೆ ಮೂಲಕ ವಿವಿಧ ಕಾರ್ಯಕ್ರಮಗಳು ನಡೆಯುತ್ತದೆ ಬರುತ್ತಿದೆ.

ಭತ್ತದ ಬೇಸಾಯ ಮರೆಮಾಚುತ್ತಿದ್ದು ಭಾದ್ರಪದ ಮಾಸದಲ್ಲಿ ದೇವಸ್ಥಾನಗಳಿಗೆ, ದೈವಸ್ಥಾನ ಹಾಗೂ ಹಿಂದುಗಳು ತನೆ ಕಟ್ಟುವುದು ಮತ್ತು ಹೊಸ ಆಕ್ಕಿ ಊಟ ಆಚರಣೆ ನಡೆಯುತ್ತದೆ. ಈ ಸಂದರ್ಭದಲ್ಲಿ ತೆನೆ ಅಗತ್ಯವಾಗಿದೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ಭತ್ತದ ಬೇಸಾಯ ಕೃಷಿ ಬೆಳೆಸುವುದು ಅನಿವಾರ್ಯ ವಾಗಿದೆ ಎಂದು ಹಿರಿಯರು ಬೇಸರ ವ್ಯಕ್ತ ಪಡಿಸುತ್ತಿದ್ದಾರೆ.

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ., ಸದಸ್ಯರಾದ ರಾಘವ ಹೆಚ್. ಹರೀಶ್ ಗೌಡ, ರೀತಾ ಚಂದ್ರಶೇಖರ್, ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು, ಮಾಜಿ ಸದಸ್ಯ ರಾಜೇಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಎಂ., ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಭಜನಾ ಮಂಡಳಿ ಅಧ್ಯಕ್ಷ ಗಣೇಶ್ ಬಿ., ಶ್ರೀದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ಮಮತಾ ಆಳ್ವ, ಪ್ರಬಂಧಕ ಗಿರೀಶ್ ಶೆಟ್ಟಿ, ಅಡ್ಡಕೊಡಂಗೆ, ಹಿರಿಯರಾದ ಪೂವಪ್ಪ ಶೆಟ್ಟಿ, ಉಮಾನಾಥ ಶೆಟ್ಡಿ ಕುಲ್ಲುಂಜ, ಉಮೇಶ್ ಶೆಟ್ಟಿ ಸಂಬೋಳ್ಯ, ಭಕ್ತಾದಿಗಳು ಮತ್ತಿತರರಿದ್ದರು.

ಕೃಷಿಕ ಕುಲ್ಲುಂಜ ನಿವಾಸಿ ಉಮನಾಥ ಶೆಟ್ಟಿ ಸ್ವತಃ ಭತ್ತದ ಬೀಜ ಬಿತ್ತನೆ ಮಾಡಿ ನೇಜಿ ತಯಾರಿಸಿ ಪ್ರತಿ ವರ್ಷದಂತೆ ದೇವಸ್ಥಾನಕ್ಕೆ ಉಚಿತವಾಗಿ ನೀಡಿದರು.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya

ಡಾ. ಎನ್. ವಿನಯ ಹೆಗ್ಡೆ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

Suddi Udaya

ಕೊಯ್ಯೂರು : ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya
error: Content is protected !!