32.6 C
ಪುತ್ತೂರು, ಬೆಳ್ತಂಗಡಿ
June 6, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೆಲ್ಯಾಡಿ ಅಮ್ಮ ಕ್ಯಾಂಟೀನ್ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ: ನೆಲ್ಯಾಡಿಯ ಹೃದಯಭಾಗದಲ್ಲಿ ಕಾರ್ಯಾಚರಿಸುತ್ತಿದ್ದ ‘ಅಮ್ಮ ಕ್ಯಾಂಟೀನ್’ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ (38ವ) ಜೂ.2ರಂದು ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲತಃ ಪಾರೆಂಕಿ ಗ್ರಾಮದ ಮಡಂತ್ಯಾರ್ ಬಳಿಯ ದಡ್ಡು ನಿವಾಸಿಯಾಗಿರುವ ಗಿರೀಶ್, ಕಳೆದ 7 ವರ್ಷಗಳಿಂದ ನೆಲ್ಯಾಡಿಯಲ್ಲಿ ‘ಅಮ್ಮ ಕ್ಯಾಂಟೀನ್’ ನಡೆಸುತ್ತಿದ್ದರು. ಸರಳತೆ, ಶುದ್ಧ ಆಹಾರ, ಹಾಗೂ ನಿಜವಾದ ಸೇವಾಭಾವನೆಗಾಗಿ ಪ್ರಸಿದ್ಧಿ ಪಡೆದಿದ್ದ ಈ ಕ್ಯಾಂಟೀನ್ ಸ್ಥಳೀಯರ ವಿಶ್ವಾಸ ಗಳಿಸಿತ್ತು. ಗಿರೀಶ್ ಅವರು ಪತ್ನಿ ಮತ್ತು ಒಂದು ಮಗು ಜೊತೆಗೆ ನೆಲ್ಯಾಡಿ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಶನಿವಾರ ದಂದು ಅವರು ತಮ್ಮ ಮೂಲ ಮನೆಗೆ ಹೋಗಿದ್ದು, ಅಲ್ಲಿ ಸೋಮವಾರ ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರಿಗೆ ಪತ್ನಿ, ಪುತ್ರ, ತಾಯಿ ಹಾಗೂ ಸಹೋದರ-ಸಹೋದರಿಯರು ಇದ್ದಾರೆ.

Related posts

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya

ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಭೇಟಿ

Suddi Udaya

ಓಡೀಲು‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಬೆದ್ರಬೆಟ್ಟು ಹಾ.ಉ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya
error: Content is protected !!