July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೆಲ್ಯಾಡಿ ಅಮ್ಮ ಕ್ಯಾಂಟೀನ್ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ: ನೆಲ್ಯಾಡಿಯ ಹೃದಯಭಾಗದಲ್ಲಿ ಕಾರ್ಯಾಚರಿಸುತ್ತಿದ್ದ ‘ಅಮ್ಮ ಕ್ಯಾಂಟೀನ್’ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ (38ವ) ಜೂ.2ರಂದು ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲತಃ ಪಾರೆಂಕಿ ಗ್ರಾಮದ ಮಡಂತ್ಯಾರ್ ಬಳಿಯ ದಡ್ಡು ನಿವಾಸಿಯಾಗಿರುವ ಗಿರೀಶ್, ಕಳೆದ 7 ವರ್ಷಗಳಿಂದ ನೆಲ್ಯಾಡಿಯಲ್ಲಿ ‘ಅಮ್ಮ ಕ್ಯಾಂಟೀನ್’ ನಡೆಸುತ್ತಿದ್ದರು. ಸರಳತೆ, ಶುದ್ಧ ಆಹಾರ, ಹಾಗೂ ನಿಜವಾದ ಸೇವಾಭಾವನೆಗಾಗಿ ಪ್ರಸಿದ್ಧಿ ಪಡೆದಿದ್ದ ಈ ಕ್ಯಾಂಟೀನ್ ಸ್ಥಳೀಯರ ವಿಶ್ವಾಸ ಗಳಿಸಿತ್ತು. ಗಿರೀಶ್ ಅವರು ಪತ್ನಿ ಮತ್ತು ಒಂದು ಮಗು ಜೊತೆಗೆ ನೆಲ್ಯಾಡಿ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಶನಿವಾರ ದಂದು ಅವರು ತಮ್ಮ ಮೂಲ ಮನೆಗೆ ಹೋಗಿದ್ದು, ಅಲ್ಲಿ ಸೋಮವಾರ ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರಿಗೆ ಪತ್ನಿ, ಪುತ್ರ, ತಾಯಿ ಹಾಗೂ ಸಹೋದರ-ಸಹೋದರಿಯರು ಇದ್ದಾರೆ.

Related posts

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

Suddi Udaya

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ : ನೆರಿಯದಲ್ಲಿ ಚಿರತೆ ದಾಳಿಯಿಂದ ಕಡವೆ ಸಾವು: ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ದಫನ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

Suddi Udaya

ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!