27 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಜಿರೆ ಪಿಎಂಶ್ರೀ ಸ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

ಬಜಿರೆ: ಇಲ್ಲಿಯ ಪಿಎಂಶ್ರೀ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಜಿರೆಯಲ್ಲಿ ಶಾಲಾ ಪ್ರಾರಂಭೋತ್ಸವವು ಕಾರ್ಯಕ್ರಮವು ಜೂ.2ರಂದು ವಿಜೃಂಭಣೆಯಿಂದ ನಡೆಯಿತು.

ಮಕ್ಕಳನ್ನು ಬ್ಯಾಂಡ್ ಸೆಟ್ ಮೂಲಕ ಮೆರವಣಿಗೆಯಲ್ಲಿ ಬರಮಾಡಿಕೊಂಡು ವಿದ್ಯಾರ್ಥಿಗಳಿಗೆ ಹೂವನ್ನು ನೀಡಿ ಸ್ವಾಗತಿಸಿ, ಸಿಹಿ ನೀಡಿ ಬರಮಾಡಿಕೊಂಡರು.

ಈ ಸಂದರ್ಭ ಕಾರ್ಯಕ್ರಮದಲ್ಲಿ ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್, ಉಪಾಧ್ಯಕ್ಷೆ ಸುಶೀಲ, ಶಾಲಾ ಮುಖ್ಯೋಪಾಧ್ಯಾಯಿನಿ ಕಮಲಾಜಿ ಎಸ್. ಜೈನ್, ಎಸ್‌ಡಿಎಂಸಿ ಸದಸ್ಯ ಕಾಶಿನಾಥ್ ಹೆಗ್ಡೆ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಶಿವಾನಂದ ಗೌಡ ಹಾಗೂ ತಾಯಂದಿರ ಸಮಿತಿ ಅಧ್ಯಕ್ಷೆ ಜಯಶ್ರೀ, ಎಸ್‌ಡಿಎಂಸಿ ಸದಸ್ಯರು, ತಾಯಂದಿರ ಸಮಿತಿಯ ಸದಸ್ಯರು, ಶಾಲಾ ಶಿಕ್ಷಕವೃಂದದವರು, ಬಿಸಿಯೂಟ ಸಿಬ್ಬಂದಿಗಳು, ಪೋಷಕರು ಉಪಸ್ಥಿತರಿದ್ದು ಸಹಕರಿಸಿದರು.

ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಹಾಗೂ ಬ್ಯಾಗ್ ವಿತರಿಸಲಾಯಿತು. ಮಧ್ಯಾಹ್ನ ಸಿಹಿ ಊಟದೊಂದಿಗೆ ಮೊಟ್ಟೆಯನ್ನು ಮತ್ತು ಬಾಳೆಹಣ್ಣನ್ನು ವಿತರಿಸಲಾಯಿತು.

Related posts

ಹಿಂದೂ ಧರ್ಮದ ವಿರುದ್ಧ ನೀಡಿರುವ ಹೇಳಿಕೆಗೆ ದ.ಕ. ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಂಘ ಮತ್ತು ಸಮಗ್ರ ಹಿಂದೂ ಸಮಾಜ ಖಂಡನೆ: ಡಾ| ಎಂ.ಎಂ. ದಯಾಕರ್

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya

ಶಿಶಿಲ: ರಥಬೀದಿ ನಿವಾಸಿ ಕುಸುಮಾವತಿ ನಿಧನ

Suddi Udaya

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲೇಜಿನ ಕಂಪೌಂಡಿಗೆ ಡಿಕ್ಕಿ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

Suddi Udaya
error: Content is protected !!