ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ರೂ. ೨.೫೦ ಲಕ್ಷ ಅನುದಾನವನ್ನು ಮಂಜೂರುಗೊಳಿಸಿದ್ದಾರೆ.
ಇದರಲ್ಲಿ ರು.೧,೫೧,೬೩೦ ಮೊತ್ತ ಸಿಲಿಕಾನ್ ಛೇಂಬರ್ಗೆ ಹಾಗೂ ರೂ.೯೮,೩೭೦ ರುದ್ರಭೂಮಿ ನಿರ್ಮಾಣಕ್ಕೆ ಧನ ಸಹಾಯವಾಗಿದ್ದು, ಧರ್ಮಸ್ಥಳದಿಂದ ಮಂಜೂರಾದ ಅನುದಾನದ ಚೆಕ್ಕನ್ನು ಜೂ.೨ರಂದು ನಡೆದ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಅವರ ಮೂಲಕ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡರಿಗೆ ಯೋಜನಾಧಿಕಾರಿ ಯೋಧರ ಅವರು ಹಸ್ತಾಂತರಿಸಲಾಯಿತು.
ಈ ಸಂದರ್ಭ ಲಾಯಿಲ ವಲಯ ಮೇಲ್ವಿಚಾರಕ ಸುಶಾಂತ್, ಕೇಂದ್ರ ಒಕ್ಕೂಟ ಅಧ್ಯಕ್ಷ ಸೀತಾರಾಮ್ ಆರ್., ಒಕ್ಕೂಟ ಪದಾಧಿಕಾರಿಗಳಾದ ದಯಾನಂದ್ ಕೋಟ್ಯಾನ್, ಯಶೋಧಾ, ಪ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಮುಖ್ಯಾಧಿಕಾರಿ ರಾಜೇಶ್ ಉಪಸ್ಥಿತರಿದ್ದರು.