September 6, 2026
Uncategorized

ಬೆಳ್ತಂಗಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯಿಂದ ನೆರವು

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ರೂ. ೨.೫೦ ಲಕ್ಷ ಅನುದಾನವನ್ನು ಮಂಜೂರುಗೊಳಿಸಿದ್ದಾರೆ.

ಇದರಲ್ಲಿ ರು.೧,೫೧,೬೩೦ ಮೊತ್ತ ಸಿಲಿಕಾನ್ ಛೇಂಬರ್‌ಗೆ ಹಾಗೂ ರೂ.೯೮,೩೭೦ ರುದ್ರಭೂಮಿ ನಿರ್ಮಾಣಕ್ಕೆ ಧನ ಸಹಾಯವಾಗಿದ್ದು, ಧರ್ಮಸ್ಥಳದಿಂದ ಮಂಜೂರಾದ ಅನುದಾನದ ಚೆಕ್ಕನ್ನು ಜೂ.೨ರಂದು ನಡೆದ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಅವರ ಮೂಲಕ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡರಿಗೆ ಯೋಜನಾಧಿಕಾರಿ ಯೋಧರ ಅವರು ಹಸ್ತಾಂತರಿಸಲಾಯಿತು.

ಈ ಸಂದರ್ಭ ಲಾಯಿಲ ವಲಯ ಮೇಲ್ವಿಚಾರಕ ಸುಶಾಂತ್, ಕೇಂದ್ರ ಒಕ್ಕೂಟ ಅಧ್ಯಕ್ಷ ಸೀತಾರಾಮ್ ಆರ್., ಒಕ್ಕೂಟ ಪದಾಧಿಕಾರಿಗಳಾದ ದಯಾನಂದ್ ಕೋಟ್ಯಾನ್, ಯಶೋಧಾ, ಪ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಮುಖ್ಯಾಧಿಕಾರಿ ರಾಜೇಶ್ ಉಪಸ್ಥಿತರಿದ್ದರು.

Related posts

ನ್ಯಾಷನಲ್ ಲೆವಲ್ ಯಕ್ಷ ನೃತ್ಯ ಸ್ಪರ್ಧೆ ಮಡಂತ್ಯಾರಿನ ಯಶಸ್ವಿನಿ ಕುಲಾಲ್ ಆಯ್ಕೆ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ನಾವೂರು ಜಾತ್ರೆಗೆ ವಿಧ್ಯುಕ್ತ ಚಾಲನೆ – ಡಾ. ವೀಣಾ ಬನ್ನಂಜೆ ಅವರಿಂದ ಶ್ರೀ ಕೃಷ್ಣ ಕಥಾಮೃತ ಪ್ರವಚನದ ಆರಂಭ: ಭಕ್ತರಿಂದ ಅದ್ಬುತ ಪ್ರತಿಕ್ರಿಯೆ

Suddi Udaya

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

Suddi Udaya

ಎಸ್ಐಆರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಪ್ರಜಾತಂತ್ರದ ಕಗ್ಗೊಲೆ ಮಾಡಲು ಯತ್ನಿಸುತ್ತಿದೆ. ರಕ್ಷಿತ್ ಶಿವರಾಂ

Suddi Udaya

ಧರ್ಮಸ್ಥಳ: ಅಪರಿಚಿತ ಮಹಿಳೆ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!