30.2 C
ಪುತ್ತೂರು, ಬೆಳ್ತಂಗಡಿ
June 7, 2025
ಶಾಲಾ ಕಾಲೇಜು

ವಾಣಿ ಕಾಲೇಜು: ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಪ್ರಭೋಧ’ ಓರಿಯಂಟೇಶನ್ ಕಾರ್ಯಕ್ರಮ

*ವಾಣಿ ಕಾಲೇಜು: ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಪ್ರಭೋಧ’ ಓರಿಯಂಟೇಶನ್ ಕಾರ್ಯಕ್ರಮ
ಬೆಳ್ತಂಗಡಿ :ದೃಢ ಚಿತ್ತದಿಂದ ಉತ್ತಮ ವಿಚಾರಗಳನ್ನು ಅಳವಡಿಸಿಕೊಂಡು ಮಹತ್ವಪೂರ್ಣ ಸಾಧನೆಯನ್ನು ಮಾಡುವುದು ವಿದ್ಯಾರ್ಥಿಗಳ ಗುರಿಯಾಗಬೇಕು ಎಂದು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಜಯಾನಂದ ಗೌಡ ಹೇಳಿದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ‘ಪ್ರಬೋಧ’ ಓರಿಯಂಟೇಶನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಯೌವ್ವನದ ಹೊಸ್ತಿಲಲ್ಲಿ ಇರುವ ವಿದ್ಯಾರ್ಥಿಗಳು ಉತ್ಸಾಹದ ಭರದಲ್ಲಿ ತಪ್ಪು ನಿರ್ಧಾರಗಳನ್ನು ಮಾಡದೆ ಗುಣಾತ್ಮಕ ಚಿಂತನೆಗಳ ಮೂಲಕ ಯಶಸ್ಸನ್ನು ಗಳಿಸಬೇಕು. ಜೀವನದಲ್ಲಿ ಶಿಸ್ತು ಸ್ವಚ್ಛತೆಯನ್ನು ಹೊಂದಿರಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಗಣೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಉಪಸಿತರಿದ್ದರು. ಮಂಗಳೂರು ರಿಫೈನರಿ ಪೆಟ್ರೋಕೆಮಿಕಲ್ ಲಿಮಿಟೆಡ್ ನ ತೆರಿಗೆ ವಿಭಾಗದ ಅಧಿಕಾರಿ ಸಿ ಎ ಸನತ್ ಕುಮಾರ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ನಡೆಸಿಕೊಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುರೇಂದ್ರ ಧನ್ಯವಾದವಿತ್ತರು. ಉಪನ್ಯಾಸಕಿ ಶ್ರೀಮತಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.
ಉಪನ್ಯಾಸಕರಾದ ಸುಧೀರ್ ಕೆಎನ್ ಮತ್ತು ಶಂಕರ್ ರಾವ್ ವಿದ್ಯಾರ್ಥಿಗಳಿಗೆ ಕಾಲೇಜಿನ ನಿಯಮಾವಳಿಗಳನ್ನು ತಿಳಿಸಿಕೊಟ್ಟರು.

Related posts

ಎಕ್ಸೆಲ್ ವಿದ್ಯಾರ್ಥಿನಿ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಏಳನೆಯ ಸ್ಥಾನ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya

ಎಸ್‌ಡಿಎಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿನೂತನ ಕಾರ್ಯಕ್ರಮ: 25 ವರ್ಷಗಳ ಹಿಂದೆ ಕಲಿತ ಹಿರಿಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಮಾವೇಶ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

Suddi Udaya
error: Content is protected !!