23.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜು

ವಾಣಿ ಕಾಲೇಜು: ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಪ್ರಭೋಧ’ ಓರಿಯಂಟೇಶನ್ ಕಾರ್ಯಕ್ರಮ

*ವಾಣಿ ಕಾಲೇಜು: ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಪ್ರಭೋಧ’ ಓರಿಯಂಟೇಶನ್ ಕಾರ್ಯಕ್ರಮ
ಬೆಳ್ತಂಗಡಿ :ದೃಢ ಚಿತ್ತದಿಂದ ಉತ್ತಮ ವಿಚಾರಗಳನ್ನು ಅಳವಡಿಸಿಕೊಂಡು ಮಹತ್ವಪೂರ್ಣ ಸಾಧನೆಯನ್ನು ಮಾಡುವುದು ವಿದ್ಯಾರ್ಥಿಗಳ ಗುರಿಯಾಗಬೇಕು ಎಂದು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಜಯಾನಂದ ಗೌಡ ಹೇಳಿದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ‘ಪ್ರಬೋಧ’ ಓರಿಯಂಟೇಶನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಯೌವ್ವನದ ಹೊಸ್ತಿಲಲ್ಲಿ ಇರುವ ವಿದ್ಯಾರ್ಥಿಗಳು ಉತ್ಸಾಹದ ಭರದಲ್ಲಿ ತಪ್ಪು ನಿರ್ಧಾರಗಳನ್ನು ಮಾಡದೆ ಗುಣಾತ್ಮಕ ಚಿಂತನೆಗಳ ಮೂಲಕ ಯಶಸ್ಸನ್ನು ಗಳಿಸಬೇಕು. ಜೀವನದಲ್ಲಿ ಶಿಸ್ತು ಸ್ವಚ್ಛತೆಯನ್ನು ಹೊಂದಿರಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಗಣೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಉಪಸಿತರಿದ್ದರು. ಮಂಗಳೂರು ರಿಫೈನರಿ ಪೆಟ್ರೋಕೆಮಿಕಲ್ ಲಿಮಿಟೆಡ್ ನ ತೆರಿಗೆ ವಿಭಾಗದ ಅಧಿಕಾರಿ ಸಿ ಎ ಸನತ್ ಕುಮಾರ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ನಡೆಸಿಕೊಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುರೇಂದ್ರ ಧನ್ಯವಾದವಿತ್ತರು. ಉಪನ್ಯಾಸಕಿ ಶ್ರೀಮತಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.
ಉಪನ್ಯಾಸಕರಾದ ಸುಧೀರ್ ಕೆಎನ್ ಮತ್ತು ಶಂಕರ್ ರಾವ್ ವಿದ್ಯಾರ್ಥಿಗಳಿಗೆ ಕಾಲೇಜಿನ ನಿಯಮಾವಳಿಗಳನ್ನು ತಿಳಿಸಿಕೊಟ್ಟರು.

Related posts

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆಒಲಿದು ಬಂದ “ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ -2025”

Suddi Udaya

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya

ಪ.ಪೂ. ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಇಂದುಮತಿ ಮತ್ತು ಪಂಚಮಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ: ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!