26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶೈಕ್ಷಣಿಕ ಪ್ರಗತಿ- ಮಿಂಚಿನ ಸಂಚಾರ ಇಲಾಖಾ ತಂಡ ಭೇಟಿ

ಪುಂಜಾಲಕಟ್ಟೆ :ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಜ್ಞಾನೇಶ್, ದ.ಕ ಜಿಲ್ಲಾ ಪ್ರಧಾನ ಮಂತ್ರಿ ಪೋಷಣ ಅಭಿಯಾನದ ಶಿಕ್ಷಣಾಧಿಕಾರಿ, ಡಯಟ್ ಮಂಗಳೂರಿನ ಹಿರಿಯ ಉಪನ್ಯಾಸಕರಾದ ಶಶಿಧರ್ ಜಿ. ಎಸ್ ಹಾಗೂ ಶ್ರೀಮತಿ ಫಾತಿಮಾ ಬಿ ಇವರ ತಂಡ 2025 -26 ಸಾಲಿನ ಶೈಕ್ಷಣಿಕ ಪ್ರಗತಿ ಚಿಂತನೆಗಾಗಿ ಮಿಂಚಿನ ಸಂಚಾರ ಕಾರ್ಯಕ್ರಮದಡಿಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಪೂಂಜಾಲಕಟ್ಟೆಗೆ ಭೇಟಿ ನೀಡಿದರು.

ಅವರು ಶಾಲಾ ವಿದ್ಯಾರ್ಥಿಗಳ ದಾಖಲಾತಿ ಹಾಗೂ ಹಾಜರಾತಿ ಮತ್ತು ಕಳೆದ ವರ್ಷದ ಹತ್ತನೇ ತರಗತಿಯ ಫಲಿತಾಂಶದ ವಿಶ್ಲೇಷಣೆ, ಶಾಲೆಗೆ ಮಂಜೂರಾದ ಹುದ್ದೆಗಳ ಬಗ್ಗೆ, ದಾಖಲಾತಿ ಆಂದೋಲನದ ಪ್ರಗತಿಯ ವಿಚಾರ, ಶಾಲಾ ವೇಳಾಪಟ್ಟಿ ಮತ್ತು ಕ್ರಿಯಾಯೋಜನೆ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸಭೆಯ ಬಗ್ಗೆ, ಪೋಷಕರ ಮತ್ತು ತಾಯಂದಿರ ಸಭೆಯ ನಿರ್ವಹಣೆಯ ಕುರಿತು, ಶಾಲಾ ಪರಿಸರದ ಕುರಿತು, ವಿದ್ಯಾರ್ಥಿಗಳಿಗೆ ನೀಡುತ್ತಿರುವ ಪ್ರೋತ್ಸಾಹದಾಯಕ ಯೋಜನೆಗಳಾದ ಸಮವಸ್ತ್ರ, ಪಠ್ಯಪುಸ್ತಕ, ಅಕ್ಷರ ದಾಸೋಹದ ಕುರಿತು, ಗ್ರಂಥಾಲಯ, ಪ್ರಯೋಗಾಲಯ, ವಾಚನಾಲಯ, ಇ- ಕಲಿಕಾ ಕೇಂದ್ರ, ಶೈಕ್ಷಣಿಕ ಬಲವರ್ಧನೆ, ಶಾಲಾ ಶೈಕ್ಷಣಿಕ ಸಾಧನೆ, ಶೌಚಾಲಯದ ಲಭ್ಯತೆ, ಕುಡಿಯುವ ನೀರಿನ ಲಭ್ಯತೆ, ಆಟದ ಮೈದಾನದ ಲಭ್ಯತೆ, ಶಾಲಾ ಕೈತೋಟ, ಶಾಲಾ ಕಟ್ಟಡ ನಿರ್ವಹಣೆ, ನನ್ನ ಶಾಲೆ ನಮ್ಮ ಜವಾಬ್ದಾರಿ ಕುರಿತು ವಿವರವಾಗಿ ಪರಿಶೀಲಿಸಿ ಸೂಕ್ತ ಸಲಹೆ ,ಸೂಚನೆ ಹಾಗೂ ಮಾರ್ಗದರ್ಶನವನ್ನು ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉಪ ಪ್ರಾಂಶುಪಾಲರಾದ ಉದಯಕುಮಾರ್ ಬಿ ಅಧಿಕಾರಿಗಳನ್ನು ಸ್ವಾಗತಿಸಿ, ಶಿಕ್ಷಕ ಬಳಗ ಮತ್ತು ಸಿಬ್ಬಂದಿಗಳು ಬರಮಾಡಿಕೊಂಡು, ಸಹ ಶಿಕ್ಷಕ ಧರಣೇಂದ್ರ ಕೆ ಧನ್ಯವಾದ ಸಲ್ಲಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಬಾರಿಕೆ ವಳಾಲ್ ಬಸದಿಯಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವ : ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಮಠದ ವತಿಯಿಂದ ಗೌರವ

Suddi Udaya

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ : ರಕ್ಷಿತ್ ಶಿವರಾಂ

Suddi Udaya

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya
error: Content is protected !!