24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2024-25 ಸಾಲಿನ ಅಂತಿಮ ವರ್ಷದ ಪರೀಕ್ಷೆ: ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇಕಡಾ 100 ಫಲಿತಾಂಶ

ಉಜಿರೆ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2024-25 ಸಾಲಿನ ಅಂತಿಮ ವರ್ಷದ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಎಲ್ಲಾ ಆರು ವಿಭಾಗಗಳೂ ಶೇಕಡಾ 100 ಫಲಿತಾಂಶ ಪಡೆದುಕೊಂಡಿವೆ.

ಒಟ್ಟು 407 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 406 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು ಒರ್ವ ವಿದ್ಯಾರ್ಥಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕಳೆದ ಮೂರು ವರ್ಷಗಳಿಂದಲೂ ಸತತವಾಗಿ ಶೇಕಡಾ 100 ಫಲಿತಾಂಶ ದಾಖಲಾಗುತ್ತಿದ್ದು ಈ ಸಾಧನೆಗಾಗಿ ವಿದ್ಯಾರ್ಥಿ ಮತ್ತು ಪ್ರಾದ್ಯಾಪಕ ವೃಂದವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಹಾಗೂ ಡಾ. ಸತೀಶ್ಚಂದ್ರರವರು ಅಭಿನಂದಿಸಿದ್ದಾರೆ ಎಂದು ಪ್ರಾಂಶುಪಾಲರಾದ ಡಾ. ಅಶೋಕ್‌ ಕುಮಾರ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕುವೆಟ್ಟು :ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya

ಉಪ್ಪಿನಂಗಡಿ ಸ.ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ರಚನಾ ಸಭೆ

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya
error: Content is protected !!