25.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜು

ವಾಣಿ ಕಾಲೇಜು: ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಪ್ರಭೋಧ’ ಓರಿಯಂಟೇಶನ್ ಕಾರ್ಯಕ್ರಮ

*ವಾಣಿ ಕಾಲೇಜು: ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಪ್ರಭೋಧ’ ಓರಿಯಂಟೇಶನ್ ಕಾರ್ಯಕ್ರಮ
ಬೆಳ್ತಂಗಡಿ :ದೃಢ ಚಿತ್ತದಿಂದ ಉತ್ತಮ ವಿಚಾರಗಳನ್ನು ಅಳವಡಿಸಿಕೊಂಡು ಮಹತ್ವಪೂರ್ಣ ಸಾಧನೆಯನ್ನು ಮಾಡುವುದು ವಿದ್ಯಾರ್ಥಿಗಳ ಗುರಿಯಾಗಬೇಕು ಎಂದು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಜಯಾನಂದ ಗೌಡ ಹೇಳಿದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ‘ಪ್ರಬೋಧ’ ಓರಿಯಂಟೇಶನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಯೌವ್ವನದ ಹೊಸ್ತಿಲಲ್ಲಿ ಇರುವ ವಿದ್ಯಾರ್ಥಿಗಳು ಉತ್ಸಾಹದ ಭರದಲ್ಲಿ ತಪ್ಪು ನಿರ್ಧಾರಗಳನ್ನು ಮಾಡದೆ ಗುಣಾತ್ಮಕ ಚಿಂತನೆಗಳ ಮೂಲಕ ಯಶಸ್ಸನ್ನು ಗಳಿಸಬೇಕು. ಜೀವನದಲ್ಲಿ ಶಿಸ್ತು ಸ್ವಚ್ಛತೆಯನ್ನು ಹೊಂದಿರಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಗಣೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಉಪಸಿತರಿದ್ದರು. ಮಂಗಳೂರು ರಿಫೈನರಿ ಪೆಟ್ರೋಕೆಮಿಕಲ್ ಲಿಮಿಟೆಡ್ ನ ತೆರಿಗೆ ವಿಭಾಗದ ಅಧಿಕಾರಿ ಸಿ ಎ ಸನತ್ ಕುಮಾರ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ನಡೆಸಿಕೊಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುರೇಂದ್ರ ಧನ್ಯವಾದವಿತ್ತರು. ಉಪನ್ಯಾಸಕಿ ಶ್ರೀಮತಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.
ಉಪನ್ಯಾಸಕರಾದ ಸುಧೀರ್ ಕೆಎನ್ ಮತ್ತು ಶಂಕರ್ ರಾವ್ ವಿದ್ಯಾರ್ಥಿಗಳಿಗೆ ಕಾಲೇಜಿನ ನಿಯಮಾವಳಿಗಳನ್ನು ತಿಳಿಸಿಕೊಟ್ಟರು.

Related posts

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya

ಭಾರೀ ಮಳೆ ಹಿನ್ನಲೆ: ನಾಳೆ ದ.ಕ. ಜಿಲ್ಲಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಅಳದಂಗಡಿ ಸಂತ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!