July 23, 2026
ಶಾಲಾ ಕಾಲೇಜು

ವಾಣಿ ಕಾಲೇಜು: ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಪ್ರಭೋಧ’ ಓರಿಯಂಟೇಶನ್ ಕಾರ್ಯಕ್ರಮ

*ವಾಣಿ ಕಾಲೇಜು: ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಪ್ರಭೋಧ’ ಓರಿಯಂಟೇಶನ್ ಕಾರ್ಯಕ್ರಮ
ಬೆಳ್ತಂಗಡಿ :ದೃಢ ಚಿತ್ತದಿಂದ ಉತ್ತಮ ವಿಚಾರಗಳನ್ನು ಅಳವಡಿಸಿಕೊಂಡು ಮಹತ್ವಪೂರ್ಣ ಸಾಧನೆಯನ್ನು ಮಾಡುವುದು ವಿದ್ಯಾರ್ಥಿಗಳ ಗುರಿಯಾಗಬೇಕು ಎಂದು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಜಯಾನಂದ ಗೌಡ ಹೇಳಿದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ‘ಪ್ರಬೋಧ’ ಓರಿಯಂಟೇಶನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಯೌವ್ವನದ ಹೊಸ್ತಿಲಲ್ಲಿ ಇರುವ ವಿದ್ಯಾರ್ಥಿಗಳು ಉತ್ಸಾಹದ ಭರದಲ್ಲಿ ತಪ್ಪು ನಿರ್ಧಾರಗಳನ್ನು ಮಾಡದೆ ಗುಣಾತ್ಮಕ ಚಿಂತನೆಗಳ ಮೂಲಕ ಯಶಸ್ಸನ್ನು ಗಳಿಸಬೇಕು. ಜೀವನದಲ್ಲಿ ಶಿಸ್ತು ಸ್ವಚ್ಛತೆಯನ್ನು ಹೊಂದಿರಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಗಣೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಉಪಸಿತರಿದ್ದರು. ಮಂಗಳೂರು ರಿಫೈನರಿ ಪೆಟ್ರೋಕೆಮಿಕಲ್ ಲಿಮಿಟೆಡ್ ನ ತೆರಿಗೆ ವಿಭಾಗದ ಅಧಿಕಾರಿ ಸಿ ಎ ಸನತ್ ಕುಮಾರ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ನಡೆಸಿಕೊಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುರೇಂದ್ರ ಧನ್ಯವಾದವಿತ್ತರು. ಉಪನ್ಯಾಸಕಿ ಶ್ರೀಮತಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.
ಉಪನ್ಯಾಸಕರಾದ ಸುಧೀರ್ ಕೆಎನ್ ಮತ್ತು ಶಂಕರ್ ರಾವ್ ವಿದ್ಯಾರ್ಥಿಗಳಿಗೆ ಕಾಲೇಜಿನ ನಿಯಮಾವಳಿಗಳನ್ನು ತಿಳಿಸಿಕೊಟ್ಟರು.

Related posts

ಸೋಣಂದೂರು ಸ. ಹಿ. ಪ್ರಾ. ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳ ಬಿಳ್ಕೋಡುಗೆ

Suddi Udaya

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಸರಕಾರಿ ಪ್ರೌಢಶಾಲೆ ಮಚ್ಚಿನ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್‌ಡಿಎಂ ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

Suddi Udaya
error: Content is protected !!