28.2 C
ಪುತ್ತೂರು, ಬೆಳ್ತಂಗಡಿ
September 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಹೋರಿಯ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಸಾಗಾಟ ಪ್ರಕರಣ: ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ : ಹೋರಿಯನ್ನು ಹಿಂಸಾತ್ಮಕ ರೀತಿಯಲ್ಲಿ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಬರುತ್ತಿದ್ದ ಇಬ್ಬರು ಹಾಗೂ ಹೋರಿಯನ್ನು ಕೊಟ್ಟ ಒಬ್ಬ ಸೇರಿ ಮೂವರ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಹಿನ್ನೆಲೆ: ಜೂ.4 ರಂದು ರಾತ್ರಿ ಉಜಿರೆ ಓಡಲ ಎಂಬಲ್ಲಿ ಇಬ್ಬರು ವ್ಯಕ್ತಿಗಳು ಒಂದು ಹೋರಿಯ ಕೊರಳಿಗೆ ನೈಲಾನ್ ಹಗ್ಗವನ್ನು ಕಟ್ಟಿ ಹಿಂಸಾತ್ಮಕವಾಗಿ ಎಳೆದುಕೊಂಡು ಬರುತ್ತಿರುವುದನ್ನು ಗಮನಿಸಿದ ಬೆಳ್ತಂಗಡಿ ಠಾಣಾ . ಪಿ.ಎಸ್.‌ ಐ ಯಲ್ಲಪ್ಪ ಹೆಚ್‌ ಮಾದಾರ ಅವರು ಸದ್ರಿ ವ್ಯಕ್ತಿಗಳನ್ನು ವಿಚಾರಿಸಿದಾಗ ದೇವರಾಜ ಟಿ. ಹೆಚ್ ಮತ್ತು ತೇಜಸ್ ಎಂದು ತಿಳಿಸಿದ್ದರೆನ್ನಲಾಗಿದೆ. ಇವರಿಬ್ಬರಲ್ಲಿ ಹೋರಿಯನ್ನು ಕೊರಳಿಗೆ ನೈಲಾನ್ ಹಗ್ಗ ಕಟ್ಟೆ ಹಿಂಸಾತ್ಮಕವಾಗಿ ಎಳೆದು ಕೊಂಡು ಬರುತ್ತಿರುವ ಬಗ್ಗೆ ಮತ್ತು ನಿಗದಿತ ಪ್ರಾಧಿಕಾರಿಂದ ಪರವಾನಗಿ ಕೇಳಿದಾಗ , ಅಟೋ‌ ಚಾಲಕ ರಿಯಾಜ್‌ ಎಂಬವರು ಹೋರಿಯನ್ನು ಟಿ.ಬಿ. ಕ್ರಾಸ್‌ ಹತ್ತಿರ ಬಿಡಲು ಹೇಳಿರುತ್ತಾರೆ ಎಂದು ತಿಳಿಸಿದ್ದರು.

ನಿಗದಿತ ಪ್ರಾಧಿಕಾರದಿಂದ ಯಾವುದೇ ಪರವಾನಗಿ ಅಥವಾ ದಾಖಲಾತಿ ಪಡೆಯದೆ ಹೋರಿಯನ್ನು ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಮಾಂಸಕ್ಕಾಗಿ ಎಳೆದುಕೊಂಡು ಹೋಗಲು ಹೋರಿಯನ್ನು ಕೊಟ್ಟ ಆರೋಪಿ ರಿಯಾಝ್‌ , ಹಾಗೂ ಅಕ್ರಮವಾಗಿ ಮಾಂಸಕ್ಕಾಗಿ ಹಿಂಸಾತ್ಮಕವಾಗಿ ಎಳೆದುಕೊಂಡು ಸಾಗಾಟ ಮಾಡುತ್ತಿದ್ದ ಆರೋಪಿಗಳಾದ ದೇವರಾಜ ಟಿ. ಹೆಚ್‌ ಮತ್ತು ತೇಜಸ್‌ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರ ನಂ : 44/2025 ಕಲಂ: 5,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ಮತ್ತು ಕಲಂ:11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆ 1960ಯಂತೆ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.

Related posts

ಕನ್ಯಾಡಿ: ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya

ಯಕ್ಷ ಭಾರತಿಯಿಂದ ಯಕ್ಷಗಾನ ತಾಳಮದ್ದಳೆ

Suddi Udaya

ಬಂಗಾಡಿ ಸ.ಪ್ರೌ. ಶಾಲೆಗೆ ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತ ಬಸವರಾಜ್ ಶಂಕರ್ ಉಮ್ರಾಣಿ ಭೇಟಿ, ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya
error: Content is protected !!